ಕಲಬುರಗಿಯಲ್ಲಿ ಮತ್ತೊಂದು ಕೊರೋನಾ: ಜನತೆಗೆ ಶ್ರೀರಾಮುಲು ವಿಶೇಷ ಮನವಿ

Published : Mar 15, 2020, 09:03 PM ISTUpdated : Mar 15, 2020, 09:04 PM IST
ಕಲಬುರಗಿಯಲ್ಲಿ ಮತ್ತೊಂದು ಕೊರೋನಾ: ಜನತೆಗೆ ಶ್ರೀರಾಮುಲು ವಿಶೇಷ ಮನವಿ

ಸಾರಾಂಶ

ಕಲಬುರಗಿಯಲ್ಲಿ ಮೃತಪಟ್ಟಿದ್ದ ವೃದ್ಧನ ಮಗಳಿಗೆ ಕೊರೋನಾ ವೈರಸ್ ಇರುವುದು ವರದಿಯಿಂದ ತಿಳಿದುಬಂದಿದ್ದು, ಜಿಲ್ಲೆಯ ಜನರು ಮತ್ತಷ್ಟು ಭಯಭೀತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಜನತೆಗೆ ಶ್ರೀರಾಮುಲು ಅಭಯ

ಕಲಬುರಗಿ, [ಮಾ.15]: ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್​ ಸೋಂಕು ಪತ್ತೆಯಾಗಿದೆ. ಕೆಲ ದಿನಗಳ ಹಿಂದಷ್ಟೇ ಕೊರೋನಾದಿಂದ ಬಳಲುತ್ತಿದ್ದ 76 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದರು. ಇಂದು (ಭಾನುವಾರ) ಮೃತ ವೃದ್ಧನ ಮಗಳಿಗೆ ಕೊರೋನಾ ಪಾಸಿಟೀವ್ ಬಂದಿದೆ.

ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್​ ಮೂಲಕ ಖಚಿತಪಡಿಸಿದ್ದಾರೆ. ಇದರಿಂದ ಕಲಬುರಗಿ ಜನತೆ ಮತ್ತಷ್ಟು ಭಯಭೀತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಜನತೆಗೆ ಯಾವುದೇ ಕಾರಣಕ್ಕೂ ಭಯಭೀತರಾಗಬೇಡಿ ಎಂದು ಧೈರ್ಯದ ಮಾತುಗಳನ್ನ ಹೇಳಿದ್ದಾರೆ.

ಕಲಬುರಗಿಯಲ್ಲಿ ಮತ್ತೊಂದು ಕೊರೋನಾ ಕೇಸ್ ಪತ್ತೆ, ಮೃತ ವೃದ್ಧನ ಪುತ್ರಿಗೆ ಸೋಂಕು

ಕಲಬುರಗಿ ಜನತೆಗೆ ಶ್ರೀರಾಮುಲು ಅಭಯ
ಮೃತ ವ್ಯಕ್ತಿಯ ನಾಲ್ವರು ಹತ್ತಿರದ ಸಂಬಂಧಿಕರಿಗೆ ಶಂಕೆ ಇತ್ತು. ನಾಲ್ವರ ಕಫ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ನಿನ್ನೆಯೇ [ಶನಿವಾರ] ಮೂವರ ವರದಿ ನೆಗೆಟಿವ್ ಬಂದಿತ್ತು. 

ಇಂದು [ಭಾನುವಾರ] ಮೃತನ ಹತ್ತಿರದ ಸಂಬಂಧಿಯೊಬ್ಬರ ವರದಿ ಕೊರೋನಾ ಪಾಸಿಟಿವ್ ಬಂದಿದೆ. ಇದರಿಂದ ಜನ ಭಯಭೀತರಾಗಬೇಕಾಗಿಲ್ಲ.  ಸರಕಾರ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಜನರೂ ಜಾಗೃತೆಯಿಂದಿರಿ. ಸ್ವಚ್ಛತೆ ಕಾಪಾಡಿಕೊಳ್ಳಿ ಎಂದು ಕರೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ