ಮುಖ್ಯಮಂತ್ರಿ ಬದಲಾವಣೆ ವಿಚಾರ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದ್ರು?

Published : Sep 18, 2023, 08:08 PM ISTUpdated : Sep 18, 2023, 08:11 PM IST
ಮುಖ್ಯಮಂತ್ರಿ ಬದಲಾವಣೆ ವಿಚಾರ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದ್ರು?

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಬೇಕೋ ಬೇಡ್ವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರು (ಸೆ. 18): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಬೇಕೋ ಬೇಡ್ವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈಜೀಪುರದಲ್ಲಿ ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ ನಡುವೆ ಪೈಪೋಟಿ ನಡೆದಿದೆ. ಇಬ್ಬರ ನಡುವೆ ಅಧಿಕಾರ ಹಂಚಿಕೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ನೋಡಿದ್ದೇನೆ. ಆದರೆ ನಾಯಕರ ಮಧ್ಯೆ ಅಂತಹ ಯಾವುದೇ ಅಧಿಕಾರ ಹಂಚಿಕೆ, ಅಸಮಾಧಾನ, ಭಿನ್ನಾಭಿಪ್ರಾಯ ಇಲ್ಲ ಎಂದರು.

ಸಿದ್ದರಾಮಯ್ಯ ಜನಪರ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ನಾವೆಲ್ಲರೂ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಅದ್ಯಾಗೂ ಸಿಎಂ ಐದು ವರ್ಷ ಮುಂದುವರಿಯಬೇಕೋ, ಬದಲಾವಣೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಆರೋಗ್ಯ ಸೇವೆ ನೀಡಲು ಬದ್ದ: ಸಚಿವ ದಿನೇಶ್ ಗುಂಡೂರಾವ್

ಸಿದ್ದರಾಮಯ್ಯ-ಡಿಕೆ ಶಿವಕುಮಾರ ನಡುವೆ ಮುಖ್ಯಮಂತ್ರಿ ಸ್ಥಾನದ ವಿಚಾರಕ್ಕೆ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಸುಕಿನ ಗುದ್ದಾಟ ನಡೆದಿದೆ. ಕೆಲವರು ಸಿದ್ದರಾಮಯ್ಯರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಯಾವುದೇ ಅಧಿಕಾರ ಹಂಚಿಕೆ ಇಲ್ಲ ಎಂದರೆ ಇನ್ನು ಕೆಲವರು ಕೆಲವರು ಎರಡೂವರೆ ವರ್ಷದಲ್ಲಿ ಸಿಎಂ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂದು ಪರೋಕ್ಷವಾಗಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ನಿಜಕ್ಕೂ ಕಾಂಗ್ರೆಸ್ ಪಾಳಯದೊಳಗೆ ಸಿಎಂ ಬದಲಾವಣೆ ಕೂಗು ಎದ್ದಿದೆಯಾ? ವಿರೋಧಿಗಳ ಸೃಷ್ಟಿಯಾ ಮುಂಬರುವ ಲೋಕಸಭಾ ಚುನಾವಣೆ ಬಳಿಕ ಗೊತ್ತಾಗಲಿದೆ. 

ಸಿಎಂ ವಿರುದ್ಧ ಮಾತನಾಡಿದರೆ ನಿಮ್ಮ ವ್ಯಕ್ತಿತ್ವಕ್ಕೆ ಹಾನಿ: ಹರಿಪ್ರಸಾದ್‌ಗೆ ಸಚಿವ ದಿನೇಶ್‌ ಸಲಹೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!