Health Minister Warns: ಚೀಸ್‌, ಪನ್ನೀರ್‌, ಬೆಣ್ಣೆ ಸೇರಿ ಯಾವುದೇ ಕೃತಕ ಆಹಾರ ಉತ್ಪನ್ನ ಬಳಸುವಂತಿಲ್ಲ: ಖಾದರ್‌ ಎಚ್ಚರಿಕೆ

Kannadaprabha News   | Kannada Prabha
Published : Aug 14, 2026, 05:29 AM IST
health minister khader warns against fake cheese panneer butter in hotels

ಸಾರಾಂಶ

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕೃತಕ ಪನ್ನೀರ್, ಚೀಸ್‌ನಂತಹ ಆಹಾರ ಪದಾರ್ಥಗಳ ಉತ್ಪಾದನೆ ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಬೆಂಗಳೂರಿನ ಹಲವು ಹೋಟೆಲ್‌ಗಳ ಮೇಲೆ ವೈದ್ಯಾಧಿಕಾರಿಗಳು ದಾಳಿ ನಡೆಸಿ, ಅಶುಚಿತ್ವ ತ್ಯಾಜ್ಯ ವಿಂಗಡಿಸದ ಕಾರಣಕ್ಕಾಗಿ ಲಕ್ಷಾಂತರ ರೂಪಾಯಿ ದಂಡ ವಿಧಿಸಿದ್ದಾರೆ.

ಬೆಂಗಳೂರು (ಆ.14): ಪನ್ನೀರ್‌ ಸೇರಿದಂತೆ ಯಾವುದೇ ಆಹಾರ ಪದಾರ್ಥಗಳ ಕೃತಕ ಉತ್ಪಾದನೆ ಮತ್ತು ಮಾರಾಟಕ್ಕೆ ಈಗಾಗಲೇ ನಮ್ಮ ಕಾನೂನಿನಲ್ಲಿ ನಿಷೇಧವಿದೆ. ಯಾವುದೇ ಕಂಪನಿಗಳು ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಎಚ್ಚರಿಸಿದರು.

ಚೀಸ್ ಪನ್ನೀರ್, ಬೆಣ್ಣೆ ಕೃತಕ ಉತ್ಪಾದನೆ ಮಾಡಿದ್ರೆ ಎಚ್ಚರ

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀಸ್‌, ಪನ್ನೀರ್‌, ಬೆಣ್ಣೆ ಮಾತ್ರಲ್ಲ ಯಾವುದೇ ಆಹಾರ ಪದಾರ್ಥಗಳನ್ನು ಕೃತಕವಾಗಿ ಉತ್ಪಾದಿಸಲು, ಮಾರಾಟ ಮಾಡಲು ರಾಜ್ಯದ ಕಾಯ್ದೆ, ಕಾನೂನಿನಲ್ಲಿ ಅವಕಾಶವಿಲ್ಲ. ಆರೋಗ್ಯಕ್ಕೆ ಹಾನಿಕಾರಕ ಪದಾರ್ಥಗಳನ್ನು ಆಹಾರ ತಯಾರಿಕೆಯಲ್ಲಿ ಬಳಸಲು ನಿಷೇಧ ಹೇರಲಾಗಿದೆ. ಅಂತಹ ಯಾವುದೇ ಆಹಾರ ಪದಾರ್ಥಗಳನ್ನು ಕೃತಕವಾಗಿ ಉತ್ಪಾದಿಸಿ ಮಾರಾಟ ಮಾಡುತ್ತಿವುದು ಕಂಡುಬಂದರೆ ಅಂತಹ ಕಂಪನಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಈ ಸಂಬಂಧ ಮತ್ತೊಂದು ವಿಶೇಷ ಆದೇಶವನ್ನೂ ಶೀಘ್ರ ಹೊರಡಿಸಲಾಗುವುದು ಎಂದು ಹೇಳಿದರು.

ನಮಗೆ ಪ್ರತಿಯೊಬ್ಬ ಮನುಷ್ಯನ ಆರೋಗ್ಯ ಮುಖ್ಯ. ಸ್ಟಾರ್‌ ಹೋಟೆಲ್‌, ಸಾಮಾನ್ಯ ಹೋಟೆಲ್‌ ಅಥವಾ ಇಂದಿರಾ ಕ್ಯಾಂಟೀನ್‌ ಇರಲಿ ಎಲ್ಲಾ ಕಡೆ ಉತ್ತಮ ಆರೋಗ್ಯಕರ ಹಾಗೂ ಗುಣಮಟ್ಟದ ಆಹಾರವನ್ನೇ ಜನರಿಗೆ ನೀಡಬೇಕು. ಹಾಗಾಗಿಯೇ ಎಲ್ಲ ಕಡೆಯೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ನಿಯಮ ಪಾಲಿಸದ ಹೊಟೇಲ್ ಮೇಲೆ ವೈದ್ಯಾಧಿಕಾರಿಗಳ ದಾಳಿ

ನಗರದ ಉತ್ತರ ಪಾಲಿಕೆ ವ್ಯಾಪ್ತಿಯ ಹೋಟೆಲ್‌ಗಳ ಮೇಲೆ ದಾಳಿ ನಡೆಸಿದ ಬ್ಯಾಟರಾಯನಪುರ ಹಾಗೂ ಯಲಹಂಕ ವಿಭಾಗದ ವೈದ್ಯಾಧಿಕಾರಿಗಳ ತಂಡ ಕಸ ವಿಂಗಡಿಸದ ಅಶುಚಿತ್ವ ಉಂಟುಮಾಡಿದ್ದರಿಂದ 1.60 ಲಕ್ಷ ರು. ದಂಡ ವಿಧಿಸಿದ್ದಾರೆ.

ಇಲ್ಲಿನ ಹಯಾತ್ ಸೆಂಟ್ರಿಕ್ ನಲ್ಲಿ ತ್ಯಾಜ್ಯ ವಿಂಗಡಿಸದ ಕಾರಣ ನೊಣಗಳು ಕಂಡುಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಿ 40 ಸಾವಿರ ದಂಡ ವಿಧಿಸಲಾಗಿದೆ.

ಪೀಪಾಯ್ ಬ್ರೇವರಿ ಮತ್ತು ಕಿಚನ್‌ಗೆ 80 ಸಾವಿರ ರೂ, ತಲಸೇರಿ ರೆಸ್ಟೋರೆಂಟ್ ಗೆ 20 ಸಾವಿರ ರೂ ದಂಡ ವಿಧಿಸಲಾಗಿದೆ. ಚಿಕ್ ಪೇಟ್ ದೊನ್ನೆ ಬಿರಿಯಾನಿ ಆಹಾರ ಮಳಿಗೆಗೆ 5 ಸಾವಿರ ದಂಡ ವಿಧಿಸಲಾಗಿದೆ. ನಂದನ ಪ್ಯಾಲೇಸ್‌ನಲ್ಲಿ ತ್ಯಾಜ್ಯ ವಿಂಗಡಣೆ ಮಾಡದ ಕಾರಣ 15 ಸಾವಿರ ರು. ದಂಡ ವಿಧಿಸಲಾಗಿದೆ. ಸ್ವಾತಿ ಹೋಟೆಲ್‌ನಲ್ಲಿ ಅನೈರ್ಮಲ್ಯಕರ ವಾತಾವರಣ ಕಂಡುಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಇನ್ಮುಂದೆ ‘ಪರ್ಮಿಷನ್’ ಕಡ್ಡಾಯ! RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ವಿಧೇಯಕ?
KSP: ಮರು ಪರೀಕ್ಷೆಯೋ? ಕಾಯಂ ನಿರ್ಧಾರವೋ? ಪೊಲೀಸ್‌ ಅಭ್ಯರ್ಥಿಗಳಿಗೆ ಬಿಗ್‌ ಟ್ವಿಸ್ಟ್! ಖಾಕಿ ಕನಸಿನ ಹಾದಿಯಲ್ಲಿ ಕಣ್ಣೀರು!