ಹಾಸನದಲ್ಲಿ ಮುಂದುವರಿದ ಹೃದಯಾಘಾತ: ಮತ್ತೋರ್ವ ಯುವಕ ಹಾರ್ಟ್​ ಅಟ್ಯಾಕ್​​ಗೆ ಬಲಿ

Published : Jul 01, 2025, 09:57 AM IST
Heart Attack

ಸಾರಾಂಶ

ಜಿಲ್ಲೆಯಲ್ಲಿ ಇಂದು ಸಹ ಸೂತಕದ ಛಾಯೆ ಮುಂದುವರೆದಿದ್ದು, ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿಯಾಗಿದ್ದಾನೆ. ಹಾಸನ‌ ಜಿಲ್ಲೆಯಲ್ಲಿ ಈಗಾಗಲೇ ಹೃದಯಾಘಾತ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿದ್ದು, ಇದೀಗ 27 ವರ್ಷದ ಸಂಜಯ್ ಮೃತಪಟ್ಟಿದ್ದಾನೆ.

ಹಾಸನ (ಜು.01): ಜಿಲ್ಲೆಯಲ್ಲಿ ಇಂದು ಸಹ ಸೂತಕದ ಛಾಯೆ ಮುಂದುವರೆದಿದ್ದು, ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿಯಾಗಿದ್ದಾನೆ. ಹಾಸನ‌ ಜಿಲ್ಲೆಯಲ್ಲಿ ಈಗಾಗಲೇ ಹೃದಯಾಘಾತ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿದ್ದು, ಇದೀಗ 27 ವರ್ಷದ ಸಂಜಯ್ ಮೃತಪಟ್ಟಿದ್ದಾನೆ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸಂಜಯ್‌ಗೆ ಬಿಪಿ ಹೆಚ್ಚಾಗಿ ಹೃದಯಾಘಾತ ಆಗಿರೊ ಬಗ್ಗೆ ಮಾಹಿತಿ ದೊರಕಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಿನ್ನೆ ಸಂಜೆ ಎದೆ ನೋವು ಎಂದು ಸೋಮನಹಳ್ಳಿ ಪ್ರಾಥಮಿಕ ಆಸ್ಪತ್ರೆಗೆ ಸಂಜಯನನ್ನ ಆತನ ಸ್ನೇಹಿತರು ಕರೆದೊಯ್ದಿದ್ದರು. ಈ ವೇಳೆ ಸಂಜಯ್‌ಗೆ ನಡೆಯಲೂ ಆಗದ ಸ್ಥಿತಿಯಿತ್ತು. ಕೂಡಲೆ ಯುವಕನ ಬಿಪಿ ಪರೀಕ್ಷೆ ಮಾಡಿದ್ದ ವೈದ್ಯರು, 220ಕ್ಕೂ ಅಧಿಕ ಪ್ರಮಾಣದಲ್ಲಿ ಬಿಪಿ ಇದ್ದ ಬಗ್ಗೆ ಮಾಹಿತಿ ನೀಡಿದರಲ್ಲದೇ, ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ರೆಫರ್ ಮಾಡೋ ವೇಳೆಯೇ ಸಂಜಯ್ ಹಠಾತ್ ಸಾವನಪ್ಪಿದ್ದ. ಇನ್ನು ಎರಡುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಂಜಯ್ ಸಾವಿನ ಬಗ್ಗೆ ಅನುಮಾನದ ದೂರನ್ನು ಸಂಬಂಧಿಕರು ನೀಡಿದ್ದಾರೆ. ಹಳ್ಳಿ ಮೈಸೂರು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ.

ಇನ್ನು ನಿನ್ನೆ ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಆರು ಹೃದಯಾಘಾತ ಪ್ರಕರಣ ವರದಿಯಾಗಿದ್ದು, ಜೂನ್ 27 ರಂದು ಈಶ್ವರಪ್ಪ ಹಾಗು ಜೂನ್ 30 ರಂದು ಕುಮಾರ್(53) ಲೇಪಾಕ್ಷಿ(51), ಮುತ್ತಯ್ಯ(58) ಸತ್ಯನಾರಾಯಣ ರಾವ್(63) ಹಾಗು ಸಂಜಯ್(27) ಸಾವನಪ್ಪಿದ್ದರು. ಸದ್ಯ ಹಾಸನ ಜಿಲ್ಲೆಯಲ್ಲಿ 24ಕ್ಕೆ ಹೃದಯಾಘಾತ ಸಾವು ಪ್ರಕರಣಗಳು ಏರಿದ್ದು, 40 ದಿನಗಳಲ್ಲಿ 24 ಜನರಿಗೆ ಹೃದಯಾಘಾತ ಆಗಿರೊ ಬಗ್ಗೆ ವರದಿಯಾಗಿದೆ. ಅಸಹಜ ಸಾವು ಪ್ರಕರಣಗಳಲ್ಲಿ ಮರಣೊತ್ತರ ಪರೀಕ್ಷೆ ನಡೆಸಲು ಡಿಸಿ ನಿರ್ದೇಶನ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ಸಂಜಯ್ ಮೃತದೇಹ ಸ್ಥಳಾಂತರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!