ದಾವಣಗೆರೆ: ಶಾಲಾ ಆವರಣದಲ್ಲೇ ಕುಸಿದುಬಿದ್ದ ದೈಹಿಕ ಶಿಕ್ಷಕ ಹೃದಯಾಘಾತದಿಂದ ಸಾವು!

Published : Jul 16, 2025, 08:47 PM IST
Attack Deaths Surge in Davanagere: Shocking Incident at Honnali School

ಸಾರಾಂಶ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಖಾಸಗಿ ಶಾಲಾ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಈ ಘಟನೆ ಆರೋಗ್ಯ ತಜ್ಞರಲ್ಲಿ ಚಿಂತೆ ಮೂಡಿಸಿದೆ.

ದಾವಣಗೆರೆ (ಜುಲೈ16): ರಾಜ್ಯಾದ್ಯಂತ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. 

ಹೊನ್ನಾಳಿಯ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ರವಿಕುಮಾರ್ (42) ಅವರು ಶಾಲಾ ಆವರಣದಲ್ಲಿ ಸಂಜೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ರಾಜ್ಯದಲ್ಲಿ ನೂರಾರು ಜನರು, ಯುವಕರು ಮತ್ತು ಮಕ್ಕಳು ಸೇರಿದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದು, ಈ ಘಟನೆಗಳು ಆತಂಕಕಾರಿ ವಾತಾವರಣ ಸೃಷ್ಟಿಸಿವೆ. ಹಾಸನ, ಮೈಸೂರು, ಬಾಗಲಕೋಟೆ, ರಾಯಚೂರು ಸೇರಿದಂತೆ ಇದೀಗ ದಾವಣಗೆರೆಯಲ್ಲೂ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿರುವುದು ಆರೋಗ್ಯ ತಜ್ಞರಲ್ಲಿ ಗಂಭೀರ ಚಿಂತೆ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌