ಹೀಟ್‌ವೇವ್ ಎಫೆಕ್ಟ್; ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ: ಪ್ರಿಯಾಂಕ್ ಖರ್ಗೆ

Published : Apr 26, 2026, 05:19 AM IST
Priyank Kharge

ಸಾರಾಂಶ

ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮವಾಗಿ ಜಲಮೂಲಗಳು ಬತ್ತುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಈ ಸಮಸ್ಯೆ ನಿಭಾಯಿಸಲು ಸರ್ಕಾರ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್‌ಗಳನ್ನು ರಚಿಸಿದೆ.

ಬೆಂಗಳೂರು: ರಾಜ್ಯವು ಹಲವು ವರ್ಷಗಳ ನಂತರ ಹೀಟ್ ವೇವ್‌ ಬಿಸಿ ಅನುಭವಿಸುತ್ತಿದೆ. ಇದರ ಪರಿಣಾಮ ಕೊಳವೆಬಾವಿ, ಅಣೆಕಟ್ಟುಗಳಲ್ಲಿ ನೀರು ಕಡಿಮೆಯಾಗಿದೆ. ಮುಂದಿನ ಎರಡು ತಿಂಗಳಲ್ಲಿ ರಾಜ್ಯ ನೀರಿನ ಸಮಸ್ಯೆ ಎದುರಿಸಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ.

ಅಲ್ಲದೆ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಮಟ್ಟದಲ್ಲಿ ಸಮಸ್ಯೆ ಮೇಲೆ ನಿಗಾವಹಿಸಿ ಪರಿಹಾರ ನೀಡಲು ಶಾಸಕರ ಅಧ್ಯಕ್ಷತೆಯ ಟಾಸ್ಕ್‌ಫೋರ್ಸ್‌ ಕೆಲಸ ಮಾಡಲಿದೆ ಎಂದು ತಿಳಿಸಿದರು.

ನೀರಿನ ಸಮಸ್ಯೆ ಎದುರಾಗದಂತೆ  ಮುಂಜಾಗ್ರತ ಕ್ರಮ 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ವರ್ಷಗಳ ನಂತರ ಹೀಟ್‌ ವೇವ್‌ನ ಅನುಭವ ಆಗುತ್ತಿದೆ. ಇದರಿಂದ ರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ಎಸ್‌ಒಪಿ ಪ್ರಕಟಿಸಲಾಗಿದೆ. ಅದರ ಜತೆಗೆ ಕೊಳವೆಬಾವಿ, ಅಣೆಕಟ್ಟುಗಳಲ್ಲಿ ನೀರು ಕಡಿಮೆಯಾಗುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸಭೆ ನಡೆಸಿದ್ದಾರೆ. ನೀರಿನ ಸಮಸ್ಯೆ ಎದುರಾಗದಂತೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸೂಚನೆ ನೀಡಿದ್ದಾರೆ ಎಂದರು.

ಹವಾಮಾನ ಏರುಪೇರಿನಿಂದ ಸಮಸ್ಯೆ ಎದುರಾಗುತ್ತದೆ. ಸಮಸ್ಯೆ ಎದುರಿಸಲು ಹಣದ ಕೊರತೆಯಿಲ್ಲ. ಆದರೆ, ಕೊಳವೆಬಾವಿ ಕೊರೆದರೂ ನೀರು ಬರಬೇಕಲ್ಲ. ಪ್ರಕೃತಿಯ ನಿಯಮವಿದು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಜಿಲ್ಲೆಗಳಲ್ಲೂ ಟಾಸ್ಕ್‌ಫೋರ್ಸ್‌ ರಚನೆಯಾಗಿದ್ದು, ಪ್ರತಿ ಟಾಸ್ಕ್‌ಫೋರ್ಸ್‌ಗೂ ಶಾಸಕರು ಅಧ್ಯಕ್ಷರಾಗಿರುತ್ತಾರೆ ಎಂದು ಹೇಳಿದರು.

ಬಿಜೆಪಿ ಬೌದ್ಧಿಕವಾಗಿ ದಿವಾಳಿ: ಪ್ರಿಯಾಂಕ್‌

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿಗೆ ಕೊನೇ ಸ್ಥಾನ ದೊರೆತ ವಿಚಾರಕ್ಕೆ ಬಿಜೆಪಿ-ಜೆಡಿಎಸ್‌ ವ್ಯಂಗ್ಯವಾಡಿರುವ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, ಬಿಜೆಪಿ-ಜೆಡಿಎಸ್‌ ಬೌದ್ಧಿಕವಾಗಿ ದಿವಾಳಿಯಾಗಿವೆ. ಯಡಿಯೂರಪ್ಪ ಅವರು ಶಿವಮೊಗ್ಗವನ್ನು ಸಿಂಗಾಪುರ ಮಾಡಿದ್ದಾರೆಯೇ? ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯನ್ನು ಹಾಂಕಾಂಗ್‌ ಮಾಡಿದ್ದಾರೆಯೇ? ಕಲಬುರಗಿಯಲ್ಲಿ ಬಿಜೆಪಿ ಬೆಂಬಲಿಗರ ಮಕ್ಕಳಿಲ್ಲವೇ? ವೈಯಕ್ತಿಕವಾಗಿ ನನ್ನ ತಂದೆ, ಪತ್ನಿ ಹಾಗೂ ನನ್ನ ಬಗ್ಗೆಯೂ ಮಾತನಾಡುತ್ತಾರೆ. ವಿರೋಧ ಪಕ್ಷದವರ ಬಳಿ ಬೇರೆ ವಿಷಯವಿಲ್ಲ. ಹೀಗಾಗಿ ಈ ರೀತಿ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಹೀಟ್‌ವೇವ್ ಎಫೆಕ್ಟ್; ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ - ಪ್ರಿಯಾಂಕ್ ಖರ್ಗೆ
Sirsi Haveri Road: ತೆರಿಗೆ ನಮ್ಮದು, ಗುಂಡಿ ನಿಮ್ಮದು; ಕೆಸರಲ್ಲಿ ಹೂತುಹೋದ ಆಳುವವರ ಮಾನ-ಮರ್ಯಾದೆ!