
ಬೆಂಗಳೂರು(ಜೂ.04): ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟುವಿನಲ್ಲಿ ತೋಟದಲ್ಲಿ ಹುಲ್ಲು ಕೊಯ್ಯಲು ಹೋಗಿದ್ದ ಮೂವರು ಮಹಿಳೆಯರು ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗ್ಳೂರಿಗೆ ಇಂದು ಭಾರೀ ಮಳೆ ಮುನ್ಸೂಚನೆ..!
ಗದಗ, ಕೊಪ್ಪಳ, ಚಿಕ್ಕಮಗಳೂರು, ಬಳ್ಳಾರಿ, ತುಮಕೂರು, ಉಡುಪಿ, ಕೊಪ್ಪಳ, ವಿಜಯನಗರ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲ ಚಿಕ್ಕ ಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಪ್ರಾರಂಭವಾಗಿದೆ. ಮಳೆಯಾಗಿದ್ದರಿಂದ ರೈತರು ಖುಷಿಯಾಗಿದ್ದು, ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮಳೆ ಹಾಗೂ ಬಿರುಗಾಳಿಗೆ ವಿದ್ಯುತ್ ಕಂಬ, ಮರಗಳು ಉರುಳಿದ್ದು, ಕೆಲವೆಡೆ ಮನೆಗಳು ಕುಸಿದಿವೆ. ಬಳ್ಳಾರಿ ಜಿಲ್ಲೆಯಲ್ಲಿ 15 ಮನೆಗಳಿಗೆ ಹಾನಿಯಾಗಿದ್ದರೆ, ವಿಜಯನಗರ ಜಿಲ್ಲೆಯಲ್ಲಿ 9 ಮನೆಗಳು ಬಿದ್ದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ