
ಬೆಂಗಳೂರು (ಮೇ.28): ನಗರದಲ್ಲಿ ಮಂಗಳವಾರ ಸುರಿದ ಗಾಳಿ ಸಹಿತ ಮಳೆಗೆ ಐದು ನಗರಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 84 ಬೃಹತ್ ಮರಗಳು, 147 ಕೊಂಬೆಗಳು ಮುರಿದು ಬಿದ್ದಿದ್ದು, ಒಂದೇ ದಿನದಲ್ಲಿ ಅರಣ್ಯ ಇಲಾಖೆ ಹಾಗೂ ಖಾಸಗಿ ಸಿಬ್ಬಂದಿ 67 ಬೃಹತ್ ಮರಗಳು ಹಾಗೂ 104 ಕೊಂಬೆಗಳನ್ನು ತೆರೆವುಗೊಳಿಸಿದ್ದಾರೆ.
ಮೇ 26ರಂದು ಬಿದ್ದ ಮಳೆಗೆ ನಗರದ ಪಶ್ಚಿಮ ಹಾಗೂ ದಕ್ಷಿಣ ಪಾಲಿಕೆ ವಿಭಾಗಗಳಲ್ಲಿ ಹೆಚ್ಚು ಮರಗಳು ಮುರಿದು ಬಿದ್ದಿದ್ದು ಪೂರ್ವ, ಉತ್ತರ ಹಾಗೂ ಕೇಂದ್ರ ಭಾಗಗಳಲ್ಲಿ ಕಡಿಮೆ ಮರಗಳು ಮುರಿದುಬಿದ್ದಿವೆ. ಕಲಾಸಿಪಾಳ್ಯ ಸಮೀಪದ ಕೆ.ಆರ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ಮನೆಗೆ ಹಾನಿಯಾಗಿತ್ತು. ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಈ ಮರವನ್ನು ತೆರವುಗೊಳಿಸಿದ್ದಾರೆ.
ಗಂಗಾನಗರದ ವಿನಾಯಕನಗರ, ಎನ್ ಜಿ ಇ ಎಫ್ ಲೇ ಔಟ್ ಕಸ್ತೂರಿನಗರದಲ್ಲಿ ಮುರಿದು ಬಿದ್ದ ಮರವನ್ನು ತೆರವುಗೊಳಿಸಿ ಈ ಭಾಗದ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ವಿಜಯನಗರ, ಇಂದಿರಾನಗರ ಸೇರಿದಂತೆ ಹಲವು ಕಡೆ ಪಾಲಿಕೆ ಸಿಬ್ಬಂದಿ ಕೊಂಬೆಗಳನ್ನು ವಾಹನಗಳ ಮೂಲಕ ಹೊರವಲಯದ ಪಾಲಿಕೆ ಸ್ಥಳಗಳಿಗೆ ತಲುಪಿಸಿದ್ದಾರೆ.
ನಗರದ ಅಂಡರ್ ಪಾಸ್ ಗಳಲ್ಲಿ ಬುಧವಾರದ ಬೆಳಿಗ್ಗೆ ವೇಳೆಗೆ ನೀರು ಖಾಲಿಯಾಗಿದ್ದು, ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಉಳಿದ 28 ಬೃಹತ್ ಮರಗಳು, 44 ಕೊಂಬೆಗಳನ್ನು ಗುರುವಾರ ತೆರವುಗೊಳಿಸಲಾಗುವುದು ಎಂದು ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ