Heavy Rain in Bengaluru: ನಗರದಲ್ಲಿ ಮಳೆರಾಯನ ಆರ್ಭಟ: ಯೆಲ್ಲೋ ಅಲರ್ಟ್

Published : Sep 05, 2022, 07:49 AM ISTUpdated : Sep 05, 2022, 07:59 AM IST
Heavy Rain in Bengaluru: ನಗರದಲ್ಲಿ ಮಳೆರಾಯನ ಆರ್ಭಟ:  ಯೆಲ್ಲೋ ಅಲರ್ಟ್

ಸಾರಾಂಶ

ಮಳೆರಾಯನ ಆರ್ಭಟ: ನಗರದಲ್ಲಿ ಯೆಲ್ಲೋ ಅಲರ್ಟ್  ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ದೇವರಜೀವನಹಳ್ಳಿ, ಆರ್‌ಟಿನಗರ, ಕೋರಮಂಗಲ ಸೇರಿದಂತೆ ವಿವಿಧ ಕಡೆ 10ಕ್ಕೂ ಅಧಿಕ ಮರ ಮುರಿದು ಬಿದ್ದಿವೆ.

ಬೆಂಗಳೂರು ಸೆ.5 : ನಗರದಲ್ಲಿ ಭಾನುವಾರವೂ ಮಳೆರಾಯನ ಅರ್ಭಟ ಮುಂದುವರೆದಿದ್ದು, ಹತ್ತಕ್ಕೂ ಅಧಿಕ ಕಡೆ ಮರ ಹಾಗೂ ಮರದ ರೆಂಬೆ ಕೊಂಬೆಗಳು ಧರೆಗುರುಳಿದ ವರದಿಯಾಗಿದೆ. ಉಳಿದಂತೆ ರಸ್ತೆ, ಅಂಡರ್‌ ಪಾಸ್‌ ಹಾಗೂ ಮೇಲ್ಸೇತುವೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಕಳೆದೊಂದು ವಾರದಿಂದ ನಗರದಲ್ಲಿ ಸಂಜೆಯ ನಂತರ ನಿರಂತವಾಗಿ ಮಳೆಯಾಗುತ್ತಿದ್ದು, ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ಮಳೆ ಸೂರ್ಯನ ದರ್ಶನವಾಯಿತು. ಸಂಜೆ 7 ಗಂಟೆ ಸುಮಾರಿಗೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಒಮ್ಮೆಲೇ ಧಾರಾಕಾರವಾಗಿ ಮಳೆ ಸುರಿಯಿತು. ದೇವರಜೀವನಹಳ್ಳಿ, ಆರ್‌ಟಿನಗರ, ಕೋರಮಂಗಲ ಸೇರಿದಂತೆ ನಗರದ ವಿವಿಧ ಕಡೆ 10ಕ್ಕೂ ಅಧಿಕ ಮರ ಹಾಗೂ ಮರದ ರಂಬೆ ಕೊಂಬೆಗಳು ಮುರಿದು ಬಿದ್ದಿವೆ.

ರಸ್ತೆಗಳು ಜಲಾವೃತ: ನಗರದ ಕಸ್ತೂರಿ ಬಾ ರಸ್ತೆ, ರಿಚ್‌ಮಂಡ್‌ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದವು. ತುಮಕೂರು ರಸ್ತೆ, ಮಲ್ಲೇಶ್ವರ, ಎಂಜಿ ರಸ್ತೆ, ಡಬ್ಬಲ್‌ ರೋಡ್‌, ಆನಂದ್‌ ರಾವ್‌ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಹಾಗೂ ಅಂಡರ್‌ ಪಾಸ್‌ನಲ್ಲಿ ನೀರು ನಿಂತುಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಯಿತು. ಶಿವಾನಂದ ವೃತ್ತದ ಬಳಿ ಮ್ಯಾನ್‌ ಹೋಲ್‌ನಿಂದ ನೀರು ಹೊರ ಬಂದು ಸಮಸ್ಯೆ ಉಂಟಾಯಿತು.

Bengaluru Rain: ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ‌ ಸಿಟಿ ರೌಂಡ್ಸ್

ಯೆಲ್ಲೋ ಅಲರ್ಟ್: ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಬೆಳಗ್ಗೆ 8.30ರ ತನಕ ನಗರಕ್ಕೆ ‘ಯೆಲ್ಲೋ ಅಲರ್ಚ್‌’ (6.45 ಸೆಂ. ಮೀ ನಿಂದ 11.55 ಸೆಂ.ಮೀ) ಎಚ್ಚರಿಕೆ ನೀಡಲಾಗಿದೆ.ರಾಜಮಹಲ್‌ ಗುಟ್ಟಹಳ್ಳಿ 8ಸೆಂ.ಮೀ, ಬಾಣಸವಾಡಿ ಮತ್ತು ವಿದ್ಯಾಪೀಠ 7.2, ಸಂಪಂಗಿರಾಮನಗರ 6.8, ಸೆಂ.ಮೀ, ಬೆಳ್ಳಂದೂರು 6.7 ಸೆಂ.ಮೀ, ವರ್ತೂರು 5.8, ಮಾರತಹಳ್ಳಿ 5.6, ಹಂಪಿನಗರ 4.4 ಸೆಂ.ಮೀ

ಬಾಗಲಕುಂಟೆ ಮತ್ತು ರಾಜರಾಜೇಶ್ವರಿ ನಗರ (2), ಎಚ್‌ಎಎಲ್‌ ತಲಾ 6.4, ದೊಡ್ಡನೆಕ್ಕುಂದಿ 5.4, ಹೆಮ್ಮಿಗೆಪುರ 3.3, ಕೊನೇನ ಅಗ್ರಹಾರ 4.9, ದೊಡ್ಡಬಿದಿರಕಲ್ಲು 2.8, ದಯಾನಂದನಗರ 2.5, ಕಮ್ಮನಹಳ್ಳಿ ಮತ್ತು ಎಚ್‌.ಗೊಲ್ಲಹಳ್ಳಿ ತಲಾ 2.3, ಮನೋರಾಯನಪಾಳ್ಯ ಮತ್ತು ಶೆಟ್ಟಿಹಳ್ಳಿ ತಲಾ 2.1 ಸೆಂ.ಮೀ ಮಳೆಯಾಗಿದೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!