Chikkamagaluru: ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ ಬೆಳೆಗಾರರಲ್ಲಿ ಹರ್ಷ

Published : Apr 11, 2024, 10:08 PM IST
Chikkamagaluru: ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ ಬೆಳೆಗಾರರಲ್ಲಿ ಹರ್ಷ

ಸಾರಾಂಶ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. 

ಚಿಕ್ಕಮಗಳೂರು (ಏ.11): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ ಮಳೆ 5.30ರ ತನಕವೂ ಒಂದೇ ಸಮನೆ ಧಾರಾಕಾರವಾಗಿ ಸುರಿದಿದ್ದು ಮಳೆ ನೀರು ರಸ್ತೆಯಲ್ಲಿ ಹರಿದಿದೆ. ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ, ಹಂಗರವಳ್ಳಿ, ಬೈಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಉತ್ತಮ ಮಳೆಯಾಗಿದೆ.

ಬಿಸಿಲ ಧಗೆಗೆ ಮಲೆನಾಡಿಗರು ಹೈರಾಣು: ಕಾಫಿನಾಡ ಮಲೆನಾಡು ಭಾಗದಲ್ಲೂ ನಿತ್ಯ 30 ರಿಂದ 35 ಡಿಗ್ರಿಯಷ್ಟು ಬಿಸಿಲಿನ ತಾಪಮಾನವಿತ್ತು. ಬಿಸಿಲ ಧಗೆಗೆ ಮಲೆನಾಡಿಗರು ಹೈರಾಣಾಗಿದ್ದರು. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣದೇವ ತಂಪೆರೆದಿದ್ದು ಮಳೆ ಕಂಡು ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಮಲೆನಾಡಿಗರು ಕಾಫಿ-ಅಡಿಕೆ-ಮೆಣಸು ಬೆಳೆಯನ್ನ ಉಳಿಸಿಕೊಳ್ಳಲು ಹೋರಾಡುತ್ತಿದ್ದು. ಮಲೆನಾಡಲ್ಲೂ ಬೋರ್‍ವೆಲ್‍ಗಳು ನಿಂತು ಹೋಗಿದ್ದವು. ಬೆಳೆಗಾರರು ಟ್ಯಾಂಕರ್‍ನಲ್ಲಿ ನೀರಾಯಿಸಿಕೊಂಡು ಬೆಳೆ ಉಳಿಸಿಕೊಳ್ಳೋದಕ್ಕೆ ಮುಂದಾಗಿದ್ದರು. 

ಯದುವಂಶದ ಋಣ ತೀರಿಸುವ ಸಮಯ ಬಂದಿದೆ, ಪ್ರಚಾರಕ್ಕೆ ಹೋಗುತ್ತೇನೆ: ಎಚ್.ವಿಶ್ವನಾಥ್

ಸುಮಾರು ಒಂದು ಗಂಟೆ ಧಾರಾಕಾರ ಮಳೆಯಾದ ಪರಿಣಾಮ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಮಲೆನಾಡ ಕುಗ್ರಾಮಗಳಲ್ಲಿ ಜನ ಕುಡಿಯೋ ನೀರಿಗೂ ಕೂಡ ಹಾಹಾಕಾರ ಅನುಭವಿಸುತ್ತಿದ್ದರು. ನದಿ-ಹಳ್ಳ-ಕೊಳ್ಳ-ಕೆರೆ-ಕಟ್ಟೆಗಳು ನೀರಿಲ್ಲದೆ ಒಣಗಿ ನಿಂತಿವೆ. ಮೂಡಿಗೆರೆಯಂತಹಾ ಮಳೆ ತವರಲ್ಲೂ ಜನ ಕುಡಿಯೋ ನೀರಿಗೆ ಟ್ಯಾಂಕರ್ ಮೊರೆ ಹೋಗಿದ್ದರು. ಇದೀಗ, ಮಲೆನಾಡಲ್ಲಿ ಅಲ್ಲಲ್ಲೇ ಮಳೆಯಾಗಿದ್ದು ಈ ಮಳೆ ಹೀಗೆ ಸುರಿಯಲೆಂದು ಜನ ವರುಣದೇವನಲ್ಲಿ ಬೇಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!
ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!