
ಬೆಂಗಳೂರು(ಜು.02): ರಾಜ್ಯದ ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಚುರುಕಾಗಿದೆ. ಭಾಗಮಂಡಲ ಸೇರಿ ಕೊಡಗಿನಾದ್ಯಂತ ಸೋಮವಾರ ಮಳೆ ಸುರಿಯಿತು.
ಇದೇ ವೇಳೆ, ಕಾರ್ಕಳ, ಹೆಬ್ರಿ ಸೇರಿ ಉಡುಪಿ ಜಿಲ್ಲೆಯ ಹಲವೆಡೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಸಂಜೆ ವೇಳೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ.
ಮಂಡ್ಯ: ಭಾರೀ ಮಳೆಗೆ ಕೆಆರ್ಎಸ್ ಡ್ಯಾಂನಲ್ಲಿ ಒಂದೇ ದಿನ 3 ಅಡಿ ನೀರು ಏರಿಕೆ
ಶೃಂಗೇರಿ ತಾಲೂಕಿನಾದ್ಯಂತ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಉತ್ತಮ ಮಳೆಯಾಗಿದ್ದು, ತುಂಗಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದೇ ವೇಳೆ, ಕೊಪ್ಪಳ ಜಿಲ್ಲೆಯಲ್ಲಿ ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಸೋಮವಾರ ಒಂದೇ ದಿನ 1 ಟಿಎಂಸಿಗಿಂತ ಅಧಿಕ ನೀರು ಹರಿದು ಬಂದಿದೆ. ಇದು ಪ್ರಸಕ್ತ ಮುಂಗಾರು ಋತುವಿನಲ್ಲಿ ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದ ಅತ್ಯಧಿಕ ಪ್ರಮಾಣದ ಒಳಹರಿವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ