ಬೆಂಗಳೂರಲ್ಲಿ ದಾಖಲೆಯ ಮಳೆ: ಒಂದೇ ದಿನ 11 ಸೆಂ.ಮೀ ವರ್ಷಧಾರೆ!

Published : Apr 30, 2020, 07:39 AM ISTUpdated : Apr 30, 2020, 09:04 AM IST
ಬೆಂಗಳೂರಲ್ಲಿ ದಾಖಲೆಯ ಮಳೆ: ಒಂದೇ ದಿನ 11 ಸೆಂ.ಮೀ ವರ್ಷಧಾರೆ!

ಸಾರಾಂಶ

ಬೆಂಗಳೂರಲ್ಲಿ ನಿನ್ನೆ ದಾಖಲೆ ಮಳೆ| ಒಂದೇ ದಿನ 11 ಸೆಂ.ಮೀ ವರ್ಷಧಾರೆ, ಇದು ಏಪ್ರಿಲ್‌ನ ಸಾರ್ವಕಾಲಿಕ ದಾಖಲೆ| ನಿನ್ನೆ ಮಳೆಗೆ ರಾಜಧಾನಿ ತತ್ತರ

ವಿಶ್ವನಾಥ ಮಲೇಬೆನ್ನೂರು

ಬೆಂಗಳೂರು(ಏ.30): ಬಿರುಬೇಸಿಗೆಯಲ್ಲೇ ವರುಣದೇವನು ಮಳೆಗಾಲದಂತೆ ಅಬ್ಬರಿಸಲು ಆರಂಭಿಸಿದ್ದಾನೆ. ಬೆಂಗಳೂರಿನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸುಮಾರು ಮೂರೂವರೆ ಗಂಟೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಏಪ್ರಿಲ್‌ ಮಾಸದಲ್ಲಿ ನಗರದಲ್ಲಿ ಸುರಿದ ಸಾರ್ವಕಾಲಿಕ ದಾಖಲೆಯ ಮಳೆಯಾಗಿದೆ.

ಹೀಗಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ದೃಢಿಕರಿಸಿದೆ. 2011ರ ಏ.23 ರಂದು ನಗರದಲ್ಲಿ 103 ಮಿ.ಮೀ ಮಳೆಯಾಗಿತ್ತು. ಅದು, ಈವರೆಗೆ ಏಪ್ರಿಲ್‌ ತಿಂಗಳಿನಲ್ಲಿ ಸುರಿದ ಭಾರೀ ಮತ್ತು ಅತಿ ಹೆಚ್ಚಿನ ಪ್ರಮಾಣ ಮಳೆ ಎಂಬ ಹೆಗ್ಗಳಿಕೆ ಪಾತ್ರವಾಗಿ ಸಾರ್ವಕಾಲಿಕ ದಾಖಲೆಯಾಗಿ ಉಳಿದಿತ್ತು. ಇದೀಗ ಬುಧವಾರ ಬೆಳಗಿನ ಜಾವ ನಗರದಲ್ಲಿ ಧಾರಾಕಾರವಾಗಿ ಸುರಿದ ಮಳೆ ಆ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಸೃಷ್ಟಿಸಿದೆ.

ಲಾಕ್‌ಡೌನ್ ಕಮಾಲ್, ಈಗ ಸಹಾರನ್ಪುರದಿಂದ್ಲೂ ಕಾಣಿಸ್ತಿದೆ ಹಿಮಾಚಲ ಪರ್ವತ!

ಬುಧವಾರ ಬೆಳಗ್ಗೆ ಕೇವಲ ಮೂರುವರೆ ತಾಸಿನಲ್ಲಿ ಸುರಿದ ಧಾರಾಕಾರ ಮಳೆ ಆ ದಾಖಲೆಯನ್ನು ಮುರಿದಿದ್ದು, ಬೆಂಗಳೂರಿನ ಹುಸ್ಕೂರಿನಲ್ಲಿ 110 ಮಿ.ಮೀ ಮಳೆಯಾದ ವರದಿಯಾಗಿದೆ. ಇದೀಗ ಬೆಂಗಳೂರು ನಗರದಲ್ಲಿ ಏಪ್ರಿಲ್‌ ತಿಂಗಳಲ್ಲಿ ಸುರಿದ ಅತ್ಯಧಿಕ ಮಳೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಸಾರ್ವಕಾಲಿಕ ದಾಖಲೆ:

2011ರ ಏ.23ಕ್ಕೂ ಹಿಂದೆ 1971ರ ಏ.17 ರಂದು ಬೆಂಗಳೂರು ನಗರದಲ್ಲಿ 64.5 ಮಿ.ಮೀ ಮಳೆಯಾಗಿತ್ತು. 2011ರ ಏಪ್ರಿಲ್‌ ವರೆಗೆ ಅದುವೇ ಸಾರ್ವಕಾಲಿಕ ದಾಖಲೆಯ ಮಳೆ ಎಂದು ಪರಿಗಣಿಸಲಾಗಿತ್ತು. 2011ರ ಏ.23ರಂದು 103 ಮಿ.ಮೀ ಸುರಿಯುವ ಮೂಲಕ 1971ರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಯಾಗಿತ್ತು. ಇದೀಗ 2011ರ ದಾಖಲೆಯನ್ನು ಬುಧವಾರದ ಮಳೆ ಮೀರಿಸಿದೆ.

ಕೋಲಾರದಲ್ಲಿ ಮಳೆ: ಟೊಮೆಟೊ, ಕ್ಯಾಪ್ಸಿಕಂಗೆ ಹಾನಿ, ಕೆಜಿ ಗಾತ್ರದ ಆಲಿಕಲ್ಲು

ಸರಾಸರಿ 48 ಮಿ.ಮೀ ಮಳೆ

ಬೆಂಗಳೂರು ನಗರದಲ್ಲಿ ವಾಡಿಕೆಯಂತೆ ಬುಧವಾರ ಕೇವಲ 1 ಮಿ.ಮೀ ಮಳೆ ನಿರೀಕ್ಷಿಸಲಾಗಿತ್ತು. ಆದರೆ, ಬುಧವಾರ ಬೆಳಗ್ಗೆ ಬರೋಬ್ಬರಿ 48 ಮಿ.ಮೀ ನಗರದಲ್ಲಿ ಮಳೆಯಾಗಿದೆ. ವಾಡಿಕೆ ಪ್ರಮಾಣಕ್ಕಿಂತ ಶೇ.4281ರಷ್ಟುಅಧಿಕ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

LPG Gas Crisis: ರಾಜ್ಯದಲ್ಲಿ ಮತ್ತೆ ಗ್ಯಾಸ್ ಟ್ರಬಲ್: ಏಜೆನ್ಸಿಗಳಿಂದಲೇ ಕಾಳಸಂತೇಲಿ ಮಾರಾಟ, ರಾಯಚೂರು, ಯಾದಗಿರಿ, ಹಾಸನ ಜನರು ಹೈರಾಣು
ಕರ್ನಾಟಕದಲ್ಲೂ ಸಾಮ್ರಾಜ್ಯ ವಿಸ್ತರಣೆಗೆ ದಳಪತಿ ಸ್ಕೆಚ್.. ಯಾರ ಸಪೋರ್ಟ್, ಏನಾಗ್ತಿದೆ ಇಲ್ಲಿ? ಸೀಕ್ರೆಟ್..