
ಬೆಂಗಳೂರು(ಮೇ.07): ನಗರದಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಗುಡುಗು, ಗಾಳಿ ಸಹಿತ ಮಳೆಗೆ ಐದಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.
ಬುಧವಾರ ಬಿಸಿಲ ಪ್ರಮಾಣ ಹೆಚ್ಚಾಗಿತ್ತು. ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ನಷ್ಟುದಾಖಲಾಗಿತ್ತು. ತಪಾಮಾನ ಏರಿಕೆ ಪರಿಣಾಮ ನಗರದಲ್ಲಿ ಬುಧವಾರ ಸಂಜೆ ಸುಮಾರು 20 ನಿಮಿಷಕ್ಕೂ ಅಧಿಕ ಕಾಲ ಧಾರಾಕಾರವಾಗಿ ಮಳೆ ಸುರಿಯಿತು.
ಹೂಳೆತ್ತದೆ ಸಮಸ್ಯೆ: ಕಾವೇರಿ ತಟದಲ್ಲಿ ಪ್ರವಾಹ ಭೀತಿ
ಗಾಳಿ ಮಳೆಗೆ ಜಯನಗರ ನಾಲ್ಕನೇ ಹಂತ, ಕುಮಾರ ಪಾರ್ಕ್ನ ಬಿಡಿಎ ಕಚೇರಿ ಬಳಿ ತಲಾ ಒಂದು ಮರ ಸೇರಿದಂತೆ ವಿವಿಧ ಕಡೆ ಐದಕ್ಕೂ ಹೆಚ್ಚು ಮರ ಹಾಗೂ ಮರ ಕೊಂಬೆ ಧರೆಗುರುಳಿವೆ ಎಂದು ಬಿಬಿಎಂಪಿ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಸರಾಸರಿ 3.27 ರಷ್ಟುಮಳೆಯಾಗಿದ್ದು, ಅತಿ ಹೆಚ್ಚು 33.50 ಮಿ.ಮೀ ಮಳೆಯಾದ ವರದಿಯಾಗಿದೆ ಎಂದು ಕೆಎಸ್ಎನ್ಡಿಎಂಸಿ ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ