
ಬೆಂಗಳೂರು(ಜು.10): ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಉಳಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಜು.16ರಂದು ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉಡುಪಿ: ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ದಕ್ಷಿಣ ಕನ್ನಡದ ಮೂಲ್ಕಿಯಲ್ಲಿ ಅತಿ ಹೆಚ್ಚು 15 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿಯಲ್ಲಿ 12, ಕದ್ರಾ 10, ಸುಳ್ಯ 8, ಕ್ಯಾಸಲ್ ರಾಕ್, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಮಾಣಿ, ಪಣಂಬೂರಿನಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ