ಕರಾವಳಿಯ 3 ಜಿಲ್ಲೆಗಳಲ್ಲಿ ಭಾರೀ ಮಳೆ: ರೆಡ್‌ ಅಲರ್ಟ್‌ ಎಚ್ಚರಿಕೆ

Published : Jul 27, 2023, 11:43 AM IST
ಕರಾವಳಿಯ 3 ಜಿಲ್ಲೆಗಳಲ್ಲಿ ಭಾರೀ ಮಳೆ: ರೆಡ್‌ ಅಲರ್ಟ್‌ ಎಚ್ಚರಿಕೆ

ಸಾರಾಂಶ

20 ಸೆಂ.ಮೀ.ವರೆಗೂ ಮಳೆಯಾಗುವ ಸಂಭವ, ಹವಾಮಾನ ಇಲಾಖೆ ಮುನ್ಸೂಚನೆ, ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ಶಾಲೆ-ಕಾಲೇಜು ರಜೆ, ಭಾರಿ ಮಳೆಯಿಂದಾಗಿ ಭಟ್ಕಳದ ರಾಷ್ಟ್ರೀಯ ಹೆದ್ದಾರಿ ಮುಳುಗಡೆ. 

ಬೆಂಗಳೂರು(ಜು.27):  ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂದುವರೆದು, ಕರಾವಳಿ ಜಿಲ್ಲೆಗಳಿಗೆ ಜುಲೈ 6 ಮತ್ತು 7ಕ್ಕೆ ಆರೆಂಜ್‌, 8 ಮತ್ತು 9ಕ್ಕೆ ಯೆಲ್ಲೋ ಅಲರ್ಟ್‌  ನೀಡಲಾಗಿದೆ.

ಒಂದೇ ವಾರದಲ್ಲಿ ಕರ್ನಾಟಕದ ಡ್ಯಾಂಗಳಿಗೆ 119 ಟಿಎಂಸಿ ನೀರು

ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌  ನೀಡಲಾಗಿದೆ.

ಇನ್ನು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ 17 ಸೆಂ.ಮೀ. ಮಳೆಯಾಗಿದೆ. ಪಣಂಬೂರು, ಮಂಗಳೂರಿನಲ್ಲಿ ತಲಾ 15, ಉತ್ತರ ಕನ್ನಡದ ಅಂಕೋಲಾದಲ್ಲಿ 12, ಶಿರಾಲಿ, ಹೊನ್ನಾವರ, ಮಂಕಿಯಲ್ಲಿ ತಲಾ 9, ಗೋಕರ್ಣ, ಬೇಲಿಕೇರಿ, ಕುಂದಾಪುರದಲ್ಲಿ ತಲಾ 8, ಗೇರಸೊಪ್ಪಾ, ಕಾರವಾರ, ಕೋಟ ಹಾಗೂ ಉಡುಪಿಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!
ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ