ಕರಾವಳಿ, ಕೊಡಗಲ್ಲಿ ಇಂದು ಭಾರೀ ಮಳೆ

Published : Jul 09, 2023, 12:30 AM IST
ಕರಾವಳಿ, ಕೊಡಗಲ್ಲಿ ಇಂದು ಭಾರೀ ಮಳೆ

ಸಾರಾಂಶ

ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾನುವಾರವೂ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಯಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ. ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಬೀಸುವ ಸಾಧ್ಯತೆ ಇದೆ. ಉಳಿದಂತೆ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಲಿದೆ. ಜು.13ರಿಂದ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು(ಜು.09):  ಇನ್ನೊಂದು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯಲಿದ್ದು, ಸೋಮವಾರದಿಂದ ಮಳೆ ಅಬ್ಬರ ಕಡಿಮೆಯಾಗಲಿದೆ. ಮತ್ತೆ ಜು.13ರಿಂದ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾನುವಾರವೂ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಯಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ.

ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಬೀಸುವ ಸಾಧ್ಯತೆ ಇದೆ. ಉಳಿದಂತೆ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಲಿದೆ. ಜು.13ರಿಂದ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗದಗ: ಮಳೆ ಮುನಿಸು, ಶೇ. 90 ಪ್ರದೇಶದಲ್ಲಿ ಬಿತ್ತನೆಯೇ ಆಗಿಲ್ಲ, ಅತಂಕದಲ್ಲಿ ಅನ್ನದಾತ..!

ಇನ್ನು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿಯೂ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಚ್‌ನ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿಯ ಕೊಲ್ಲೂರಿನಲ್ಲಿ ಅತಿ ಹೆಚ್ಚು 15 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ 13, ಗೇರುಸೊಪ್ಪದಲ್ಲಿ 12, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 11, ಹೊನ್ನಾವರ, ಶಿರಾಲಿ, ಗೋಕರ್ಣ, ಮಂಕಿಯಲ್ಲಿ ತಲಾ 9 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ