ಇಂದು, ನಾಳೆ ಕರ್ನಾಟಕದ ಹಲವೆಡೆ ಭಾರೀ ಮಳೆ

Published : Jul 11, 2023, 08:29 AM IST
ಇಂದು, ನಾಳೆ ಕರ್ನಾಟಕದ ಹಲವೆಡೆ ಭಾರೀ ಮಳೆ

ಸಾರಾಂಶ

ಇಂದು ಮತ್ತು ನಾಳೆ ಕರಾವಳಿಯ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ. 

ಬೆಂಗಳೂರು(ಜು.11):  ರಾಜ್ಯದಲ್ಲಿ ಇಂದು(ಮಂಗಳವಾರ) ಮತ್ತು ನಾಳೆ(ಬುಧವಾರ) ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇಂದು ಮತ್ತು ನಾಳೆ ಕರಾವಳಿಯ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. 

ಬತ್ತಿದ ಜಲಾಶಯದೊಳಗಿಂದ ಎದ್ದು ಬಂದಿವೆ ಸಾವಿರದ ಕಥೆಗಳು!

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಮೀ ಇರಲಿದ್ದು, ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಇರಲಿದ್ದು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣ ಕ್ಷೇತ್ರಕ್ಕೆ 323 ಕೋಟಿ ರೂಪಾಯಿ ಗಿಫ್ಟ್: ಖಜಾನೆ ಖಾಲಿ ಅಂದೋರಿಗೆ ಈ ಕಾಮಗಾರಿಗಳೇ ಉತ್ತರ; ವಿಪಕ್ಷಗಳಿಗೆ ಯತೀಂದ್ರ ಸಿದ್ದರಾಮಯ್ಯ ಟಾಂಗ್!
ವರುಣದಲ್ಲಿ ಮಹಿಳಾ ಅಧಿಕಾರಿಗೆ ಅವಮಾನ: ಇದು 'ಸಿದ್ದರಾಮಯ್ಯ ಸಂಸ್ಕೃತಿ' ಎಂದು ಗುಡುಗಿದ ವಿಜಯೇಂದ್ರ!