ಕರ್ನಾಟಕದಲ್ಲಿ ಸೋಮವಾರದವರೆಗೂ ಭಾರೀ ಮಳೆ..!

Published : Oct 02, 2022, 01:30 AM IST
ಕರ್ನಾಟಕದಲ್ಲಿ ಸೋಮವಾರದವರೆಗೂ ಭಾರೀ ಮಳೆ..!

ಸಾರಾಂಶ

ಭಾನುವಾರ ಬೆಳಗ್ಗೆ 8.30ರ ತನಕ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.

ಬೆಂಗಳೂರು(ಅ.02): ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಸೋಮವಾರದವರೆಗೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಭಾನುವಾರ ಬೆಳಗ್ಗೆ 8.30ರ ತನಕ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಆ ಬಳಿಕ ಸೋಮವಾರ ಬೆಳಗ್ಗೆ 8.30ರ ತನಕ ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗುಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಉಳಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

Chitradurga: ಅಕಾಲಿಕ ಮಳೆಗೆ ಸುಮಾರು 71153 ಹೆಕ್ಟೇರ್ ಬೆಳೆ ನಾಶ: ಕಂಗಾಲಾದ ಅನ್ನದಾತ

ರಾಜ್ಯದ ಒಳನಾಡಿನಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಪೂರ್ಣಗೊಂಡ 24 ಗಂಟೆ ಅವಧಿಯಲ್ಲಿ ಮುಂಗಾರು ಚುರುಕಾಗಿತ್ತು. ಕರಾವಳಿ ಕರ್ನಾಟಕದ ಹಲವೆಡೆ ಮಳೆಯಾಗಿದೆ. ಗದಗದ ಶಿರಹಟ್ಟಿಯಲ್ಲಿ 10 ಸೆಂ.ಮೀ, ಬಳ್ಳಾರಿಯ ಕಂಪ್ಲಿ 6, ಗದಗದ ಶಿರಾಲಿ, ಲಕ್ಷ್ಮೇಶ್ವರ, ರಾಯಚೂರು, ಮಸ್ಕಿಯಲ್ಲಿ ತಲಾ 5, ದಕ್ಷಿಣ ಕನ್ನಡದ ಪಣಂಬೂರು, ಸುಬ್ರಹ್ಮಣ್ಯ, ಉತ್ತರಕನ್ನಡದ ಮಂಕಿ, ಹೊನ್ನಾವರ, ಹಳಿಯಾಳ, ಬೆಳಗಾವಿಯ ಬೈಲಹೊಂಗಲ, ಧಾರವಾಡದ ಕುಂದಗೋಳ, ಹಾವೇರಿಯ ಶಿಗ್ಗಾಂವ್‌, ದಾವಣಗೆರೆಯ ಹರಪ್ಪನಹಳ್ಳಿ, ತುಮಕೂರಿನ ಹೆಬ್ಬೂರಿನಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು