
ಬೆಂಗಳೂರು(ಜೂ.10): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದಲ್ಲಿ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 11 ರಂದು ಕರವಾಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶ, ಮೊದಲ ದಿನವೇ 4 ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ 12 ಹಾಗೂ 13 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್,ಧಾರವಾಡ, ಹಾವೇರಿ,ಕಲಬುರಗಿ,, ಯಾದಗಿರಿ, ಅರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಹಾಗೂ ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಮಯದಲ್ಲಿ 64. ಮಿ.ಮೀನಿಂದ 115.5 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಎಸ್ ಆರ್ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ