ಬೀದರ್‌: ಏಕಾಏಕಿ ಭಾರೀ ಗಾಳಿ, ಸಿಡಿಲು ಗುಡುಗು ಸಹಿತ ಮಳೆ; ಆತಂಕಗೊಂಡ ಜನರು!

Published : Mar 17, 2024, 06:52 PM IST
ಬೀದರ್‌: ಏಕಾಏಕಿ ಭಾರೀ ಗಾಳಿ, ಸಿಡಿಲು ಗುಡುಗು ಸಹಿತ ಮಳೆ; ಆತಂಕಗೊಂಡ ಜನರು!

ಸಾರಾಂಶ

ಒಂದು ಕಡೆ ಬೇಸಗೆ ಬಿಸಲು, ಇನ್ನೊಂದು ಕಡೆ ಮಳೆ ಸಹಿತ ಬಿರುಗಾಳಿ. ಬೀದರ್‌ನಲ್ಲಿ ಸಂಜೆ ಏಕಾಏಕಿ ಸುರಿದ ಅಕಾಲಿಕ ಮಳೆಗೆ ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡರು.

ಬೀದರ್ (ಮಾ.17): ಒಂದು ಕಡೆ ಬೇಸಗೆ ಬಿಸಲು, ಇನ್ನೊಂದು ಕಡೆ ಮಳೆ ಸಹಿತ ಬಿರುಗಾಳಿ. ಬೀದರ್‌ನಲ್ಲಿ ಸಂಜೆ ಏಕಾಏಕಿ ಸುರಿದ ಅಕಾಲಿಕ ಮಳೆಗೆ ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡರು.
ಬೀದರ್ ಜಿಲ್ಲೆಯ ಜನವಾಡ, ಭಾಲ್ಕಿಯ ಕೋಸಂ ಹಾಗೂ ಬೀದರನ ಹಲವು ಹಳ್ಳಿಯಲ್ಲಿ ಜನರು ಹೈರಾಣ. ಗುಡುಗು ಸಹಿತ ಭಾರೀ ಮಳೆಗೆ ಆತಂಕಗೊಂಡ ಜನರು. ಮಧ್ಯಾಹ್ನ 3 ಗಂಟೆಗೆ ಆರಂಭವಾದ ಭಾರೀ ಗಾಳಿ ಸಹಿತ ಮಳೆ, ಒಂದೇ ಗಂಟೆಯಲ್ಲಿ ಇಡೀ ಹಳ್ಳಿಯಲ್ಲಿ ಅವಾಂತರ ಸೃಷ್ಟಿಸಿದೆ. ರೈತರ ಬೆಳೆಗಳಿಗೆ ಅಪಾರ ಹಾನಿ ಉಂಟುಮಾಡಿದೆ.

2024 ಜಗತ್ತಿಗೇ ಒಳ್ಳೆದಲ್ಲ! ದುರಂತಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

 

ಕೊಡಗಿನಲ್ಲಿ 2 ದಿನಗಳಿಂದ ಅಕಾಲಿಕ ಮಳೆ: ಕಾಫಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾಳು, ಸಂಕಷ್ಟದಲ್ಲಿ ರೈತರು!

ಬೆಳಗ್ಗೆಯಿಂದ ವಿಪರೀತ ಬಿಸಲಿಗೆ ಬಸವಳಿದಿದ್ದ ಜನರು ಸಂಜೆ ಏಕಾಏಕಿ ಮೋಡ ಕವಿದು ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಸಿಡಿಲು ಬಡಿದು ತೆಂಗಿನಮರಕ್ಕೆ ಬೆಂಕಿ ಹೊತ್ತಿಕೊಂಡಿತು. ತಕ್ಷಣ ತೆಂಗಿನ ಮರ ಕೀಳಿದ ಮನೆಯ ಮಾಲೀಕ ಶಂಕರ್. ಬಿರುಗಾಳಿ ಬೃಹತ್ ಮರಗಳು ಧರೆಗುರುಳಿಬಿದ್ದಿವೆ. ಸಣ್ಣಪುಟ್ಟ ತಗಡಿನ ಮನೆಗಳು ಸಹ ಬಿರುಗಾಳಿಗೆ ಕಿತ್ತುಬಿದ್ದಿವೆ. ಮನೆಯಲ್ಲಿ ವಸ್ತುಗಳು ಹಾಳಾಗಿ ಜನರು ಮೊದಲ ಮಳೆಗೆ ಹೈರಾಣಾದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ