
ದಕ್ಷಿಣ ಕನ್ನಡ (ಮೇ.31) : ಮುಂದಿನ 48 ಗಂಟೆಯೊಳಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರ್ಗಿ, ಬಳ್ಳಾರಿ, ಧಾರವಾಡ ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದ್ದು ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗಲಿದ್ದು, ಘಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಸಿಡಿಲು-ಮಳೆ ಆರ್ಭಟ, ಅಥಣಿಯಲ್ಲಿ ಇಬ್ಬರ ಸಾವು; ನಾಳೆ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
ಭಾರೀ ಮಳೆಯಾಗುವ ಸಾದ್ಯತೆ ಹಿನ್ನೆಲೆ ಜನರು ಅನಗತ್ಯ ಪ್ರಯಾಣ ತಪ್ಪಿಸಬೇಕು, ಪ್ರಯಾಣವೇಳೆ ಎಚ್ಚರಿಕೆಯಿಂದ ಚಾಲನೆ ಮಾಡಬೇಕು, ಆದಷ್ಟು ಸುರಕ್ಷಿತ ಆಶ್ರಯ ಪಡೆಯಿರಿ. ಬಿರುಗಾಳಿ ಸಹಿತ ಮಳೆ ಬೀಳುವಾಗ ಹೊರಗಡೆ ನಿಲ್ಲುವುದು ಬೇಡ ಮನೆಯೊಳಗೆ ಇರುವಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಬರುವ ವೇಳೆ ಕಿಟಕಿ ಬಾಗಿಲುಗಳನ್ನು ಮುಚ್ಚುಬೇಕು. ಕಾಂಕ್ರೀಟ್ ಗೋಡೆಗಳಿಗೆ ಒರಗದಂತೆ. ಗುಡುಗು ಸಿಡಿಲು ಸಹಿತ ಮಳೆಯಾಗುವ ವೇಳೆ ವಿದ್ಯುತ್ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್ಪ್ಲಗ್ ಮಾಡುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ವಿರಾಜಪೇಟೆ ವ್ಯಾಪ್ತಿಯಲ್ಲಿ ಭಾರಿ ಮಳೆ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದೆ. ಗಾಳಿ ಸಹಿತ ಸುರಿದ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ.
ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರೀ ಮಳೆ: ಸಿಡಿಲಿಗೆ ಮೂವರು ಬಲಿ
ವಿರಾಜಪೇಟೆ-ಅಮ್ಮತ್ತಿ ರಸ್ತೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ರಸ್ತೆಯ ಅಡ್ಡಲಾಗಿ ವಿದ್ಯುತ್ ಕಂಬಗಳು ಕೂಡ ಧರೆಗುರುಳಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇದರಿಂದ ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿದೆ. ವಿರಾಜಪೇಟೆ, ಮಗ್ಗುಲ ಅಮ್ಮತ್ತಿ ಸುತ್ತಮುತ್ತ ಸುರಿದ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ