ಇಂದಿನ 'ಹಲೋ ಮಿನಿಸ್ಟರ್'ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ

By Suvarna NewsFirst Published Oct 23, 2021, 4:39 PM IST
Highlights

ಇಂದಿನ 'ಹಲೋ ಮಿನಿಸ್ಟರ್' ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ್ ಪೂಜಾರಿ ಆಗಮಿಸಿದ್ದರು. ಶ್ರೀನಿವಾಸ ಪೂಜಾರಿ ಅವರು ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಮಾಡಿದವರು.

ಬೆಂಗಳೂರು (ಅ. 23): ಇಂದಿನ 'ಹಲೋ ಮಿನಿಸ್ಟರ್' ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ್ ಪೂಜಾರಿ ಆಗಮಿಸಿದ್ದರು. ಶ್ರೀನಿವಾಸ ಪೂಜಾರಿ ಅವರು ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಮಾಡಿದವರು.  ಇವರ ವೈಯಕ್ತಿಕ ಜೀವನ, ರಾಜಕೀಯ ಪ್ರವೇಶದ ಬಗ್ಗೆ ಒಂದು ಪರಿಚಯ ಹೀಗಿದೆ. 

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಷ್ ಇದುವರೆಗೂ ಬಂದಿಲ್ಲ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಇನ್ನು ವೇತನವಾಗಿಲ್ಲ ಎಂಬಿತ್ಯಾದಿ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. 

ಕೊಪ್ಪಳದಲ್ಲಿರುವ ಅಸ್ಪೃಶ್ಯತೆ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಶೀಘ್ರದಲ್ಲಿಯೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು

"

click me!