ಸಿಎಂ ಸಭೆಯಲ್ಲಿ ತೆಗೆದುಕೊಂಡ‌ ಪ್ರಮುಖ ನಿರ್ಧಾರಗಳು..!

By Suvarna NewsFirst Published May 10, 2021, 11:18 PM IST
Highlights

* ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ
* ಲಾಕ್ ಡೌನ್ ಜಾರಿಯಾದ ನಂತರ ವ್ಯಕ್ತವಾಗಿರುವ ಪ್ರತಿಕ್ರಿಯೆ ಕುರಿತು ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ
* ಸಿಎಂ ಸಭೆಯಲ್ಲಿ ತೆಗೆದುಕೊಂಡ‌ ಪ್ರಮುಖ ನಿರ್ಧಾರಗಳು

ಬೆಂಗಳೂರು, (ಮೇ.10): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಸೋಮವಾರ) ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್ -19 ನಿಯಂತ್ರಣದ ಕುರಿತು ಚರ್ಚೆ ನಡೆಸಿದರು.

 ಈ ವೇಳೆ ಕೋವಿಡ್ -19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕೊಂಚ ಬದಲಾವಣೆ: ವಾಹನ ಬಳಕೆಗೆ ಷರತ್ತುಬದ್ಧ ಅನುಮತಿ

ಸಿಎಂ ಸಭೆಯ ಹೈಲೈಟ್ಸ್..

* ಪ್ರಮುಖವಾಗಿ ಕಟ್ಟುನಿಟ್ಟಿನ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು ಜನರು ಅನಗತ್ಯವಾಗಿ ಓಡಾಡುವುದನ್ನು‌ ತಪ್ಪಿಸಬೇಕು.
*ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮಿಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಲು ಎಂದರು.

*ಖಾಸಗಿ ಆಸ್ಪತ್ರೆ ಗಳ ಬೆಡ್ ಗಳ ಬಗ್ಗೆ ನಿಗಾ ಇಡಬೇಕು ಅಲ್ಲದೆ ಆಕ್ಸಿಜನ್, ರೆಮಿಡಿಸಿವಿರ್ ಹಾಗು ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಬೇಕು.

* ವಾರ್ ರೂಮ್ ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು.
* ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆ ಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಾನೆ ಕೆಲಸ ಶುರು ಮಾಡಲು ಸೂಚಿಸಲಾಯಿತು.

* 3 ನೇ‌ ಅಲೆಗೆ ಈಗಿನಿಂದಾನೆ ಸಿದ್ದರಾಗಬೇಕಿದ್ದು ಅದಕ್ಕೊಂದು‌ ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ಸೂಚಿಸಲಾಯಿತು.
ಶಾಸಕರು ಹಾಗು ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿ‌ ಜಿಲ್ಲೆಗಳ ಕರೋನ‌ ಪರಿಸ್ಥಿತಿ ಹತೋಟಿಗೆ ತರಲು‌ ಶ್ರಮಿಸಬೇಕು ಎಂದು ಕರೆ ನೀಡಿದರು.

click me!