ಸಿಎಂ-ಜಿಲ್ಲಾಧಿಕಾರಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಪ್ರಮುಖಾಂಶಗಳು..!

Published : May 02, 2020, 02:38 PM IST
ಸಿಎಂ-ಜಿಲ್ಲಾಧಿಕಾರಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಪ್ರಮುಖಾಂಶಗಳು..!

ಸಾರಾಂಶ

ಕೇಂದ್ರ ಸರ್ಕಾರ ಮೇ.17ರ ವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಆದ್ರೆ, ಇತ್ತ ರಾಜ್ಯ ಸರ್ಕಾರ ಆರ್ಥಿಕ ಪುನಶ್ಚೇತನಕ್ಕಾಗಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದು, ಈ ಸಂಬಂಧ ಶನಿವಾರ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳೇನು..? ಪ್ರಮುಖಾಂಶಗಳು ಇಲ್ಲಿವೆ.

ಬೆಂಗಳೂರು, (ಮೇ.೦2): ಲಾಕ್‌ಡೌನ್‌ ಅನ್ನು ಕೇಂದ್ರ ಸರ್ಕಾರ ಮೇ.17ರ ವರೆಗೆ ವಿಸ್ತರಿಸಿದ ಬೆನ್ನಲ್ಲೇ ಇತ್ತ ರಾಜ್ಯ ಸರ್ಕಾರ ಮುಂದೆ ಏನ್ಮಾಡ್ಬೇಕು ಎನ್ನುವ ಬಗ್ಗೆ ಸಿಎಂ ಸಭೆ ನಡೆಸಿದರು. 

ಕೋವಿಡ್-19 ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.

ಮದ್ಯ ಬೆನ್ನಲ್ಲೇ KSRTC ಬಸ್ ಸಂಚಾರಕ್ಕೂ ಅನುಮತಿ: ಯಾವಾಗಿನಿಂದ..? 

ಇಂದು (ಶನಿವಾರ) ವೀಡಿಯೊ ಕಾನ್ಫರೆನ್ಸ್‌ನಲ್ಲಿ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

ಸಭೆಯ ಪ್ರಮುಖಾಂಶಗಳು ಇಂತಿವೆ...!

* ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. 

* ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಅವರು ನಿರ್ದೇಶಿಸಿದರು.

* ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನ.

* ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಸೂಚನೆ. 

* ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ನಿರ್ಧಾರ.

* ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ