
ದೆಹಲಿ (ಜೂ.02) ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಭಾರಿ ಚರ್ಚೆಗಳು, ಕುತೂಹಲಗಳು ಇದೀಗ ಸಂಪುಟ ಸೇರ್ಪಡೆಯತ್ತ ನೆಟ್ಟಿದೆ. ಯಾರಿಗೆ ಸಚಿವ ಸ್ಥಾನ ಅನ್ನೋ ಕುರಿತು ಕಾಂಗ್ರೆಸ್ ಹೈಕಮಾಂಡ್ ಸತತ ಚರ್ಚೆ ನಡೆಸುತ್ತಿದೆ. ಇದರ ನಡುವೆ ಮಹತ್ವದ ಆದೇಶ ಹೊರಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮ್ಯಗೆ ಕಾಂಗ್ರೆಸ್ ಕಾರ್ಯಕಾರಿ ಸಮತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಅವರನ್ನು CWC ಸದಸ್ಯರಾಗಿ ನೇಮಕಗೊಳಿಸಿ ಕೆಸಿ ವೇಣುಗೋಪಾಲ್ ಅದೇಶ ಹೊರಡಿಸಿದ್ದಾರೆ.
ಅಧಿಕಾರ ಹಂಚಿಕೆ ಕುರಿತು ಕಾಂಗ್ರೆಸ್ ವಲಯದಲ್ಲೇ ಕಳೆದ ಎರಡು ವರ್ಷದಿಂದ ಭಾರಿ ಚರ್ಚೆಯಾಗುತ್ತಿತ್ತು. ಕೊನೆಗೆ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಬಳಿಕ ಸ್ವತಃ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಇತ್ತ ಉಪ ಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಕೋರ್ ಕಮಿಟಿಗೆ ಸಿದ್ದರಾಮಯ್ಯ ಭಾರಿ ಒತ್ತಾಯಿಸಿದ್ದರು. ಇದೀಗ ಅಳೆದು ತೂಗಿ ಕಾಂಗ್ರೆಸ್ ಹೈಕಮಾಂಡ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ ಮಾಡಿದೆ.
ಸಿದ್ದರಾಮಯ್ಯ ರಾಜೀನಾಮೆ ಬಳಿಕ ನಡೆದ ಚರ್ಚೆಯಲ್ಲಿ ಹೈಕಮಾಂಡ್ ಮುಂದೆ ಮಹತ್ವದ ಬೇಡಿಕೆ ಮುಂದಿಟ್ಟಿದ್ದರು ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಕೋರ್ ಕಮಿಟಿ ರಚನೆಗೆ ಒತ್ತಾಯಿಸಿದ್ದು. ಈ ಕೋರ್ ಕಮಿಟಿಯ ನೇತೃತ್ವ ವಹಿಸಿಕೊಳ್ಳಲು ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದರು. ಆದರೆ ಹೈಕಮಾಂಡ್ ರಾಜ್ಯದಲ್ಲಿ ಕೋರ್ ಕಮಿಟಿ ರಚನೆ ಬಗ್ಕೆ ನಿರಾಸಕ್ತಿ ತೋರಿದೆ. ಮುಖ್ಯಮಂತ್ರಿ ಸ್ಥಾನ ತೊರೆದ ಸಿದ್ದರಾಮಯ್ಯಗೆ ಇದೀಗ CWC ಸದಸ್ಯ ಜವಾಬ್ದಾರಿ ನೀಡಿದೆ.
ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಸತತ ಸಭೆ ನಡೆಸಿದ್ದಾರೆ. ಸಂಪುಟ ಸೇರ್ಪಡೆ ಕುರಿತು ಉಭಯ ನಾಯಕರು ತಮ್ಮದೇ ಆದ ಲಿಸ್ಟ್ ನೀಡಿದ್ದರು. ಈ ಕುರಿತು ಹಲವು ಸುತ್ತಿನ ಮಾತುಕತೆ ನಡೆದಿದೆ. ಕೊನೆಗೆ 14 ಸಚಿವರು ಡಿಕೆ ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ