ಸಚಿವ ಕೆ.ಜೆ. ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಿಡದ ಸರ್ಕಾರ; ನೋಟೀಸ್ ಕೊಟ್ಟ ಹೈಕೋರ್ಟ್!

Published : Nov 15, 2024, 06:44 PM ISTUpdated : Nov 15, 2024, 06:48 PM IST
ಸಚಿವ ಕೆ.ಜೆ. ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಿಡದ ಸರ್ಕಾರ; ನೋಟೀಸ್ ಕೊಟ್ಟ ಹೈಕೋರ್ಟ್!

ಸಾರಾಂಶ

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ ಅವರ ಹೆಚ್.ಡಿ. ಕೋಟೆ ಬಳಿಯ ಅರಣ್ಯದೊಳಗಿನ ಜಮೀನಿಗೆ ಸರ್ಕಾರ ಸಂಚಾರ ನಿರ್ಬಂಧ ವಿಧಿಸಿದೆ. ಈ ನಿರ್ಬಂಧವನ್ನು ಪ್ರಶ್ನಿಸಿ ರಾಣಾ ಜಾರ್ಜ್ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು (ನ.15): ರಾಜ್ಯ ಸರ್ಕಾರದ ಇಂಧನ ಸಚಿವರಾಗಿರುವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್ ಅವರು ಹೆಚ್.ಡಿ. ಕೋಟೆಯ ಬಳಿಯ ಗ್ರಾಮಗಳ ಅರಣ್ಯದೊಳಗೆ ಕೃಷಿ ಸಂಬಂಧಿತ ತೋಟ ಹಾಗೂ ಜಮೀನು ಹೊಂದಿದ್ದಾರೆ. ಆದರೆ, ಅರಣ್ಯದೊಳಗಿರುವ ಜಮೀನಿಗೆ ಹೋಗದಂತೆ ರಾಜ್ಯ ಸರ್ಕಾರ ತಡೆಯನ್ನುಂಟ್ಟು ಮಾಡಿತ್ತು. ಈ ಸಂಬಂಧದ ಪ್ರಕರಣ ವಿಚಾರಣೆಗೆ ಕೈಗೆತ್ತಿಕೊಂಡು ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಲಾಗಿದೆ.

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ಬಳಿಯ ಶಂಭುಗೌಡನಹಳ್ಳಿ, ಲಕ್ಕಸೋಗೆ ಗ್ರಾಮಗಳಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ ಜಮೀನು ಹೊಂದಿದ್ದಾರೆ. ಈ ಜಮೀನಿಗೆ ಹೋಗಬೇಕೆಂದರೆ ಹಚ್.ಡಿ. ಕೋಟೆಯ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಜಮೀನಿಗೆ ಹೋಗಬೇಕು. ಆದರೆ, ರಾಜ್ಯ ಸರ್ಕಾರದಿಂದ ಅರಣ್ಯದೊಳಗೆ ಜಮೀನಿಗೆ ಹೋಗಲು ಹಾದಿ ಬಳಕೆ ಮಾಡದಂತೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕುಪಿತಗೊಂಡ ರಾಣಾ ಜಾರ್ಜ್ ಸರ್ಕಾರದ ನಿರ್ಬಂಧವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರಣ್ಯದಲ್ಲಿ ಜಮೀನನ್ನು ಹೊಂದಿದವರು ತಮ್ಮ ಜಮೀನಿಗೆ ಹೋಗಲು ಅವಕಾಶ ನೀಡಬೇಕು. ರಾತ್ರಿ ಹಾಗೂ ಹಗಲಿನ ಸಮಯದಲ್ಲಿ ಅನಿರ್ಬಂಧಿವಾಗಿ ಸಂಚರಿಸಲು ಅನುಮತಿ ಅಗತ್ಯವಿದೆ. ಅನುಮತಿ ನೀಡುವಂತೆ ಅರಣ್ಯಾಧಿಕಾರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಅರಣ್ಯ ಇಲಾಖೆ ಹಾಗೂ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಇದನ್ನೂ ಓದಿ: ಮಗಳಿಗೆ ಭುವನೇಶ್ವರಿ ಎಂದು ನಾಮಕರಣ ಮಾಡಿ, 2000 ಜನರಿಗೆ ಊಟ ಹಾಕಿದ ಕನ್ನಡದ ದಂಪತಿ

ಈ ವೇಳೆ ರಾಣಾ ಜಾರ್ಜ್‌ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರು, ಅಭಯಾರಣ್ಯದ ವ್ಯಾಪ್ತಿಯಲ್ಲಿ ಜಮೀನು ಹೊಂದಿರುವವರಿಗೆ ಸಂಚರಿಸಲು ವಿನಾಯಿತಿ ಇದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಕಲಂ 27(1)(ಸಿ) ಅಡಿ ವಿನಾಯಿತಿ ಇದೆ. ಆದರೆ, ಅರಣ್ಯ ಇಲಾಖೆ ಅರ್ಜಿದಾರರ ವಿರುದ್ಧ ಕಾನೂನುಬಾಹಿರ ಆದೇಶ ಹೊರಡಿಸಿದೆ. ಇದು ಸಂವಿಧಾನದ 19 (1)(ಡಿ) ವಿಧಿಗೆ ವ್ಯತಿರಿಕ್ತವಾಗಿದೆ. ಮುಕ್ತಸಂಚಾರಕ್ಕೆ ಅಡ್ಡಿ ಮಾಡಿರುವ ಅರಣ್ಯ ಇಲಾಖೆಯ ಈ ನಿರ್ಬಂಧವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ರಾಣಾ ಜಾರ್ಜ್ ಪರ ವಕೀಲರು ಹಾಗೂ ರಾಜ್ಯ ಸರ್ಕಾರದ ಪರ ವಕೀಲರ ವಾದ ಪ್ರತಿವಾದಗಳನ್ನು ಆಲಿಸಿದ್ದಾರೆ. ನಂತರ ಅರಣ್ಯ ಇಲಾಖೆಯ ನಿಯಮಾವಳಿಯಲ್ಲಿ ಜಮೀನಿಗೆ ಹೋಗಲು ಅವಕಾಶ ನೀಡಬೇಕು ಎಂಬ ಬಗ್ಗೆ ಉಲ್ಲೇಖವಿದ್ದರೂ, ನಿರ್ಬಂಧ ವಿಧಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ, ಅರಣ್ಯ ಇಲಾಖೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಇನ್ನ ಮುಂದಿನ ವಿಚಾರಣೆಯನ್ನು ನ.29ಕ್ಕೆ ಮುಂದೂಡಿಕೆ ಮಾಡಿದ್ದಾರೆ.

ಇದನ್ನೂ ಓದಿ: ಹಿಂದಿ ಬಿಗ್ ಬಾಸ್-18 ಶೀಘ್ರದಲ್ಲೇ 'ದಿ ಎಂಡ್'; ಕನ್ನಡ ಬಿಗ್ ಬಾಸ್-11ರ ಕಥೆಯೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ