ವಿಚಾರಣೆಗೆ ಹೊರರಾಜ್ಯದ ಜಡ್ಜ್‌ ಕರೆಸಿ ಎಂದವಗೆ 1 ಲಕ್ಷ ರು. ದಂಡ..!

Kannadaprabha News   | Asianet News
Published : Jan 13, 2021, 07:13 AM ISTUpdated : Jan 13, 2021, 07:46 AM IST
ವಿಚಾರಣೆಗೆ ಹೊರರಾಜ್ಯದ ಜಡ್ಜ್‌ ಕರೆಸಿ ಎಂದವಗೆ 1 ಲಕ್ಷ ರು. ದಂಡ..!

ಸಾರಾಂಶ

1 ಲಕ್ಷ ರು. ದಂಡ ವಿಧಿಸಿದ ಹೈಕೋರ್ಟ್‌| ಆಟಿಕೆ ಮಾರುವ ಮಕ್ಕಳ ಪುನರ್ವಸತಿಗೆ ಬಳಸಲು ಸೂಚನೆ| ಸೋಸಲೆ ಮಠದ ಸಿವಿಲ್‌ ವ್ಯಾಜ್ಯ ಪ್ರಕರಣ| 

ಬೆಂಗಳೂರು(ಜ.13):  ಸೋಸಲೆ ವ್ಯಾಸರಾಜ ಮಠದ ವಿರುದ್ಧದ ಸಿವಿಲ್‌ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಅರ್ಜಿದಾರನಿಗೆ ಹೈಕೋರ್ಟ್‌ ಒಂದು ಲಕ್ಷ ರು. ದಂಡ ವಿಧಿಸಿದೆ.

ಬೆಂಗಳೂರಿನ ಗವಿಪುರ ಎಕ್ಸ್‌ಟೆನ್ಷನ್‌ ನಿವಾಸಿ ವಿ.ಗುರುರಾಜ್‌ ಸೋಸಲೆ ವ್ಯಾಸರಾಜ ಮಠದ ವಿರುದ್ಧ ಸಿವಿಲ್‌ ವ್ಯಾಜ್ಯ ಕುರಿತು ಅರ್ಜಿ ಸಲ್ಲಿಸಿದ್ದರು. ರಾಜ್ಯದ ಬಹುತೇಕ ಎಲ್ಲ ನ್ಯಾಯಮೂರ್ತಿಗಳು ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿಯೊಬ್ಬರ ಪ್ರಭಾವಕ್ಕೆ ಒಳಗಾಗಿದ್ದಾರೆ. ಹೀಗಾಗಿ, ತನ್ನ ಅರ್ಜಿಯನ್ನು ಕರ್ನಾಟಕ ಮೂಲದ ನ್ಯಾಯಮೂರ್ತಿಗಳ ಬದಲಿಗೆ ಹೊರ ರಾಜ್ಯದ ನ್ಯಾಯಮೂರ್ತಿಯವರ ಮುಂದೆ ವಿಚಾರಣೆಗೆ ನಿಗದಿ ಮಾಡುವಂತೆ ಅರ್ಜಿಯಲ್ಲಿ ಕೋರಿದ್ದರು.

ಮಧ್ಯಪ್ರದೇಶ ಜಡ್ಜ್‌ ಸತೀಶ್‌ ಚಂದ್ರ ಶರ್ಮಾ ಕರ್ನಾಟಕ ಹೈಕೋರ್ಟ್‌ಗೆ

ಅದನ್ನ ತೀವ್ರವಾಗಿ ಆಕ್ಷೇಪಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಪದೇ ಪದೇ ನಿವೃತ್ತ ಸಿಜೆಐ ವಿರುದ್ಧ ಆರೋಪ ಮಾಡಿದ್ದಾರೆ. ಈ ರೀತಿ ಆರೋಪ ಮಾಡಿರುವುದು ದುರದೃಷ್ಟಕರ. ಅರ್ಜಿದಾರರ ಮನವಿ ಆಘಾತಕಾರಿಯಾಗಿದೆ. ಇದು ನ್ಯಾಯಾಂಗದ ಘನತೆಗೆ ಧಕ್ಕೆ ತರುತ್ತಿದೆ. ವಿನಾಕಾರಣ ನ್ಯಾಯಮೂರ್ತಿಗಳ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸುತ್ತಿರುವುದು ಖಂಡನೀಯ. ಇಂತಹ ನಡವಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.

ಅಲ್ಲದೆ, ಅರ್ಜಿದಾರನಿಗೆ ಒಂದು ಲಕ್ಷ ರು. ದಂಡ ವಿಧಿಸಿತು. ಆ ದಂಡದ ಮೊತ್ತವನ್ನು ರಸ್ತೆಯ ಸಿಗ್ನಲ್‌ಗಳಲ್ಲಿ ಆಟಿಕೆ ಮಾರುವ ಮಕ್ಕಳ ಪುನರ್ವಸತಿಗೆ ಬಳಸುವಂತೆ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್