ನ್ಯಾಯಾಲಯ ಹೇಳಿದರೂ ಸಹಜೀವನ ನಡೆಸದಿದ್ರೆ ವಿಚ್ಛೇದನಕ್ಕೆ ಆಧಾರ: ಹೈಕೋರ್ಟ್‌

Published : Oct 21, 2023, 12:00 AM IST
ನ್ಯಾಯಾಲಯ ಹೇಳಿದರೂ ಸಹಜೀವನ ನಡೆಸದಿದ್ರೆ ವಿಚ್ಛೇದನಕ್ಕೆ ಆಧಾರ: ಹೈಕೋರ್ಟ್‌

ಸಾರಾಂಶ

ಪ್ರಕರಣವೊಂದರಲ್ಲಿ ಒಂದಾಗಿ ಬಾಳುವಂತೆ ಸೂಚಿಸಿದ್ದ ನ್ಯಾಯಾಲಯದ ಆದೇಶವನ್ನು ಪತ್ನಿ ಪಾಲಿಸದೇ ಇದ್ದರೂ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಲು ನಿರಾಕರಿಸಿದೆ ಎಂದು ಆಕ್ಷೇಪಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ಮಾಡಿ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ.

ಬೆಂಗಳೂರು(ಅ.21):  ಪತಿಯೊಂದಿಗೆ ಬಾಳುವಂತೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಲಿಸದಿರುವುದು ವಿವಾಹ ವಿಚ್ಛೇದನಕ್ಕೆ ಆಧಾರವಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.

ಪ್ರಕರಣವೊಂದರಲ್ಲಿ ಒಂದಾಗಿ ಬಾಳುವಂತೆ ಸೂಚಿಸಿದ್ದ ನ್ಯಾಯಾಲಯದ ಆದೇಶವನ್ನು ಪತ್ನಿ ಪಾಲಿಸದೇ ಇದ್ದರೂ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಲು ನಿರಾಕರಿಸಿದೆ ಎಂದು ಆಕ್ಷೇಪಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ಮಾಡಿ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ.

ಅಕ್ರಮ ಆಸ್ತಿ ಪ್ರಕರಣ ಮತ್ತೆ ಸಂಕಷ್ಟ ; ಡಿಕೆಶಿ ವಾದ ಒಪ್ಪದ ಹೈಕೋರ್ಟ್‌

ವಿವಾಹದ ನಂತರ ಕೆಲವು ವರ್ಷ ಒಂದಾಗಿ ಬಾಳಿದ್ದ ಪತಿ- ಪತ್ನಿ ನಂತರ ಪ್ರತ್ಯೇಕವಾಗಿ ವಾಸ ಮಾಡಿದ್ದರು. ಇದರಿಂದ ಪತಿಯ ಮನವಿ ಮೇರೆಗೆ ಕೌಟುಂಬಿಕ ನ್ಯಾಯಾಲಯ ದಂಪತಿಯ ವೈವಾಹಿಕ ಜೀವನದ ಹಕ್ಕುಗಳನ್ನು ಮರು ಸ್ಥಾಪಿಸಿತ್ತು. ಜತೆಗೆ, ಪತಿಯೊಂದಿಗೆ ಒಂದುಗೂಡಿ ಬಾಳುವಂತೆ ಪತ್ನಿಗೆ ಸೂಚಿಸಿ ಏಕಪಕ್ಷೀಯ ಆದೇಶ ಹೊರಡಿಸಿತ್ತು. ಒಂದೂವರೆ ವರ್ಷ ಕಳೆದರೂ ಪತ್ನಿ ನ್ಯಾಯಾಲಯದ ಆದೇಶ ಪಾಲಿಸದೇ ಇರುವ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ಇದು ವಿವಾಹ ವಿಚ್ಚೇದನಕ್ಕೆ ಆಧಾರವಾಗಲಿದೆ. ಈ ಅಂಶ ಪರಿಗಣಿಸದೆ ಕೌಟುಂಬಿಕ ನ್ಯಾಯಾಲಯ ಪತಿಯ ಅರ್ಜಿ ವಜಾಗೊಳಿಸಿರುವುದು ಸರಿಯಲ್ಲ ಎಂದು ತೀರ್ಮಾನಿಸಿದ ಹೈಕೋರ್ಟ್‌, ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ