ರೇಪ್‌ ಕೇಸ್‌: ಜಾಮೀನು ಅರ್ಜಿ ವಜಾ, ಬೇಲ್‌ ಪಡೆಯಲು ಪ್ರಜ್ವಲ್‌ ರೇವಣ್ಣ ಅರ್ಹರಲ್ಲ ಎಂದ ಹೈಕೋರ್ಟ್‌!

Published : Oct 22, 2024, 10:42 AM IST
ರೇಪ್‌ ಕೇಸ್‌: ಜಾಮೀನು ಅರ್ಜಿ ವಜಾ, ಬೇಲ್‌ ಪಡೆಯಲು ಪ್ರಜ್ವಲ್‌ ರೇವಣ್ಣ ಅರ್ಹರಲ್ಲ ಎಂದ ಹೈಕೋರ್ಟ್‌!

ಸಾರಾಂಶ

ಮೇಲ್ನೋಟಕ್ಕೆ ಅರ್ಜಿದಾರರ ಕೃತ್ಯಗಳು ಲಂಪಟ ಹಾಗೂ ಇಂದ್ರಿಯಗಳ ಮೇಲೆ ನಿಯಂತ್ರಣ ಕಳೆದುಕೊಂಡಿರುವುದು ಮತ್ತು ಸ್ವಾಸ್ಥ ಸಮಾಜದ ಬೆನ್ನುಹುರಿಗೆ ಚಳಿ ಹುಟ್ಟಿಸುವುದನ್ನು ಚಿತ್ರಿಸುತ್ತಿದೆ. ಹಾಗಾಗಿ, ಜಾಮೀನು ಪಡೆಯಲು ಪ್ರಜ್ವಲ್ ರೇವಣ್ಣ ಅರ್ಹರಾಗಿಲ್ಲ ಎಂದು ಕಟುವಾಗಿ ನುಡಿದ ಹೈಕೋರ್ಟ್ 

ಬೆಂಗಳೂರು(ಅ.22): ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಲ್ಲಿಸಿದ್ದ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ. 

ಪ್ರಜ್ವಲ್‌ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಪ್ರಜ್ವಲ್ ಹೈಕೋರ್ಟ್‌ಗೆ ಸಲ್ಲಿಸಿದ್ದರು. ಮೂರು ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಮೇಲ್ನೋಟಕ್ಕೆ ಅರ್ಜಿದಾರರ ಕೃತ್ಯಗಳು ಲಂಪಟ ಹಾಗೂ ಇಂದ್ರಿಯಗಳ ಮೇಲೆ ನಿಯಂತ್ರಣ ಕಳೆದುಕೊಂಡಿರುವುದು ಮತ್ತು ಸ್ವಾಸ್ಥ ಸಮಾಜದ ಬೆನ್ನುಹುರಿಗೆ ಚಳಿ ಹುಟ್ಟಿಸುವುದನ್ನು ಚಿತ್ರಿಸುತ್ತಿದೆ. ಹಾಗಾಗಿ, ಜಾಮೀನು ಪಡೆಯಲು ಪ್ರಜ್ವಲ್ ರೇವಣ್ಣ ಅರ್ಹರಾಗಿಲ್ಲ ಎಂದು ಕಟುವಾಗಿ ನುಡಿದಿದ್ದಾರೆ. 

ಪ್ರಜ್ವಲ್ ರೇವಣ್ಣ 'ಸೀರೆ'ಯಸ್ ಕೇಸ್ ಡಿಎನ್‌ಎ ಟೆಸ್ಟ್‌ನಲ್ಲಿ ಸಾಬೀತು!

ಹೈಕೋರ್ಟ್‌ನ ಈ ಆದೇಶದಿಂದ ಪ್ರಜ್ವಲ್ ಅವರು ಈಗ ಜಾಮೀನುಗಾಗಿ ಸುಪ್ರಿಂ ಕೋರ್ಟ್ ಮೊರೆ ಹೋಗಬೇಕಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!