
ಬೆಂಗಳೂರು(ಆ.27): ಅತ್ಯಾಚಾರ, ಸಂತ್ರಸ್ತೆಯನ್ನ ಕಿಡ್ನಾಪ್ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಬಿಗ್ ಡೇ ಆಗಲಿದೆ. ಹೌದು, ಜಾಮೀನು ರದ್ದುಪಡಿಸುವಂತೆ ಕೋರಿ ಎಸ್ಐಟಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು.
ಅರ್ಜಿ ಸಂಬಂಧ ಹೈಕೋರ್ಟ್ ನಾಳೆ(ಬುಧವಾರ) ಆದೇಶ ಪ್ರಕಟಿಸಲಿದೆ. ಇದೇ ವೇಳೆ ಅಪಹರಣ ಪ್ರಕರಣದ ಇತರೆ ಆರೋಪಿಗಳಾದ ಎಚ್.ಕೆ. ಸುಜಯ್, ಸತೀಶ್ ಬಾಬಣ್ಣ, ರಾಜಗೋಪಾಲ, ಮಾವುಗೌಡ ಅವರ ಜಾಮೀನು ಅರ್ಜಿ ಆದೇಶ ಕೂಡ ಪ್ರಕಟಿಸಲಿದೆ.
ನ್ಯಾ.ಎಂ. ನಾಗಪ್ರಸನ್ನ ಅವರ ನ್ಯಾಯಪೀಠದಿಂದ ಆದೇಶ ಹೊರಬೀಳಲಿದೆ. ವಾದ-ಪ್ರತಿವಾದವನ್ನ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನಾಳೆ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಎಚ್.ಡಿ. ರೇವಣ್ಣ ಅವರಿಗೆ ಈಗಿನಿಂದಲೇ ತಳಮಳ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ