ಬೆಂಗಳೂರು ಲಾಕ್‌ಡೌನ್‌: ಇಂದಿರಾ ಕ್ಯಾಂಟೀನ್‌ ಊಟ, ತಿಂಡಿಗೆ ಹೆಚ್ಚಿನ ಬೇಡಿಕೆ

Kannadaprabha News   | Asianet News
Published : Jul 16, 2020, 09:13 AM IST
ಬೆಂಗಳೂರು ಲಾಕ್‌ಡೌನ್‌: ಇಂದಿರಾ ಕ್ಯಾಂಟೀನ್‌ ಊಟ, ತಿಂಡಿಗೆ ಹೆಚ್ಚಿನ ಬೇಡಿಕೆ

ಸಾರಾಂಶ

ಬೆಂಗಳೂರು ನಗರದ ಬಹುತೇಕ ಹೋಟೆಲ್‌, ರೆಸ್ಟೋರೆಂಟ್‌ ಬಂದ್‌ ಹಿನ್ನೆಲೆ| ಇಂದಿರಾ ಕ್ಯಾಂಟೀನ್‌ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಸಾರ್ವಜನಿಕರು, ನಿರ್ಗತಿಕರು, ಭಿಕ್ಷುಕರು| ಲಾಕ್‌ಡೌನ್‌ ಇರುವುದರಿಂದ ಪಾರ್ಸಲ್‌ ಮೂಲಕ ಬೆಳಗ್ಗೆ ಉಪಹಾರ ಮಧ್ಯಾಹ್ನ ಹಾಗೂ ರಾತ್ರಿ ಊಟ ವಿತರಣೆ|

ಬೆಂಗಳೂರು(ಜು.16): ಲಾಕ್‌ಡೌನ್‌ ಪರಿಣಾಮ ನಗರದ ಬಹುತೇಕ ಹೋಟೆಲ್‌, ರೆಸ್ಟೋರೆಂಟ್‌ ಎಲ್ಲವೂ ಬಂದ್‌ ಆಗಿದ್ದರಿಂದ ಸಾಮಾನ್ಯ ಜನರು, ಬಡವರು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಬಂದು ಊಟ, ತಿಂಡಿ ಪಡೆದುಕೊಂಡಿದ್ದಾರೆ. 

ಆಯ್ದ ಹೊಟೇಲ್‌ಗಳಲ್ಲಿ ಮಾತ್ರ ಊಟ, ತಿಂಡಿಗಳ ಪಾರ್ಸಲ್‌ ಸೇವೆ ಇತ್ತು. ಹೀಗಾಗಿ ಬಡವರು ಇಂದಿರಾ ಕ್ಯಾಂಟೀನ್‌ ಕಡೆಗೆ ಮುಖ ಮಾಡಿದರು. ಇದರಿಂದ ಮಾಮೂಲಿ ದಿನಗಳಿಗಿಂತ ಊಟ, ತಿಂಡಿಗಳಿಗೆ ಶೇ.30ರಷ್ಟು ಹೆಚ್ಚಿನ ಬೇಡಿಕೆ ಉಂಟಾಯಿತು ಎಂದು ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಕೆ ಮಾಡುವ ಶೇಫ್‌ ಟ್ಯಾಕ್‌ ಸಂಸ್ಥೆಯ ಮುಖ್ಯಸ್ಥ ಗೋವಿಂದ ಪೂಜಾರಿ ತಿಳಿಸಿದ್ದಾರೆ.

ಬೆಂಗಳೂರು ಲಾಕ್‌ಡೌನ್‌: SSLC ಮೌಲ್ಯಮಾಪನಕ್ಕೆ ಅರ್ಧದಷ್ಟು ಶಿಕ್ಷಕರು ಗೈರು

‘ಕನ್ನಡಪ್ರಭ’ ಜೊತೆ ಮಾತನಾಡಿದ ಅವರು, ಸಾಮಾನ್ಯ ದಿನದಲ್ಲಿ ಒಂದು ಇಂದಿರಾ ಕ್ಯಾಂಟೀನ್‌ನಲ್ಲಿ ಹೊತ್ತಿಗೆ ಸುಮಾರು 250 ಪ್ಲೇಟ್‌ ಊಟ, ಉಪಹಾರ ಮಾರಾಟವಾಗುತ್ತಿತ್ತು. ಬುಧವಾರ ಶೇ.30 ರಷ್ಟು ಗ್ರಾಹಕರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ, 250 ಪ್ಲೇಟ್‌ ಮಾರಾಟವಾಗುವ ಕ್ಯಾಂಟೀನ್‌ಗಳಲ್ಲಿ 300 ಪ್ಲೇಟ್‌ ಮಾರಾಟವಾಯಿತು. ಇನ್ನು ನಿಗದಿತ 5ಕ್ಕೆ ಉಪಹಾರ ಹಾಗೂ 10ಕ್ಕೆ ಊಟ ವಿತರಣೆ ಮಾಡಲಾಯಿತು ಎಂದು ತಿಳಿಸಿದರು.

ಲಾಕ್‌ಡೌನ್‌ನಿಂದ ನಗರದಲ್ಲಿ ಎಲ್ಲ ಹೋಟೆಲ್‌, ದರ್ಶಿನಿಗಳು ಬಂದ್‌ ಆಗಿದ್ದರಿಂದ ಸಾರ್ವಜನಿಕರು, ನಿರ್ಗತಿಕರು, ಭಿಕ್ಷುಕರು ಇಂದಿರಾ ಕ್ಯಾಂಟೀನ್‌ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಲಾಕ್‌ಡೌನ್‌ ಇರುವುದರಿಂದ ಪಾರ್ಸಲ್‌ ಮೂಲಕ ಬೆಳಗ್ಗೆ ಉಪಹಾರ ಮಧ್ಯಾಹ್ನ ಹಾಗೂ ರಾತ್ರಿ ಊಟ ವಿತರಣೆ ಮಾಡಲಾಯಿತು ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ