Vande Bharat Express Train: ಬೆಂಗಳೂರು- ಹುಬ್ಬಳ್ಳಿ ನಡುವೆ ಅತಿವೇಗದ ವಂದೇ ಭಾರತ್‌ ರೈಲು

Published : Sep 15, 2022, 08:45 AM IST
Vande Bharat Express Train: ಬೆಂಗಳೂರು- ಹುಬ್ಬಳ್ಳಿ ನಡುವೆ ಅತಿವೇಗದ ವಂದೇ ಭಾರತ್‌ ರೈಲು

ಸಾರಾಂಶ

ಬೆಂಗಳೂರಿಂದ ಚೆನ್ನೈ, ಕೊಯಮತ್ತೂರಿಗೂ ಈ ರೈಲು ಪ್ರಸ್ತಾಪ, ಅನುಮೋದನೆ ಸಿಕ್ಕಿದೆ ದಕ್ಷಿಣ ಭಾರತದಲ್ಲಿ ಮೊದಲ ಸಲ ವಂದೇ ಭಾರತ್‌ ಸಂಚಾರ

ಹುಬ್ಬಳ್ಳಿ(ಸೆ.15):  ಬೆಂಗಳೂರಿನಿಂದ ಹುಬ್ಬಳ್ಳಿ ಸೇರಿದಂತೆ ಮೂರು ನಗರಗಳಿಗೆ ಅತ್ಯಾಧುನಿಕ, ಅತಿವೇಗದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕೆ ನೈಋುತ್ಯ ರೇಲ್ವೆ (ಎಸ್‌ಡಬ್ಲ್ಯುಆರ್‌) ಮುಂದಾಗಿದೆ. ಈ ಕುರಿತು ಅದು ರೈಲ್ವೆ ಮಂಡಳಿಗೆ ಪ್ರಸ್ತಾವ ಸಲ್ಲಿಸಿದೆ. ಒಂದು ವೇಳೆ ರೈಲ್ವೆ ಮಂಡಳಿ ಪ್ರಸ್ತಾಪವನ್ನು ಅನುಮೋದಿಸಿದರೆ ಶೀಘ್ರವೇ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

ಬೆಂಗಳೂರು- ಹುಬ್ಬಳ್ಳಿ, ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು- ಕೊಯಮತ್ತೂರು ನಡುವೆ ವಂದೇಭಾರತ್‌ ರೈಲುಗಳ ಸಂಚಾರ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಜನಪ್ರಿಯತೆ ಹಾಗೂ ಕಾರ್ಯಸಾಧತೆ ಆಧಾರದ ಮೇರೆಗೆ ವಂದೇ ಭಾರತ ರೈಲಿಗೆ ಈ ಮೂರು ಮಾರ್ಗಗಳನ್ನು ಪ್ರಸ್ತಾಪಿಸಲಾಗಿದೆ. ಒಂದು ವೇಳೆ ಅನುಮೋದನೆ ಸಿಕ್ಕಿದರೆ ದಕ್ಷಿಣ ಭಾರತದಲ್ಲಿ ಈ ರೈಲುಗಳ ಮೊದಲ ಸಂಚಾರವಾಗಲಿದೆ.

ಮೊಟ್ಟೆ, ಮಾಂಸವಿಲ್ಲದ ಆಹಾರ, ಇದು ದೇಶದ ಮೊದಲ ಸಸ್ಯಾಹಾರಿ ರೈಲು!

ಮೂರು ವರ್ಷಗಳ ಹಿಂದೆ ಭಾರತೀಯ ರೈಲ್ವೆ ಚಾಲನೆ ನೀಡಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳು ಗಂಟೆಗೆ 130 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿವೆ. ಜೊತೆಗೆ ವಿಶಾಲ ಕಿಟಕಿ, ಉತ್ತಮ ಆಹಾರ ಸೌಲಭ್ಯ, ಮನರಂಜನೆ ವ್ಯವಸ್ಥೆ, ರೈಲಿನೊಳಗೆ ವೈಫೈ ಸೇವೆ, ಸ್ವಯಂಚಾಲಿತ ಬಾಗಿಲು, ಬಯೋವ್ಯಾಕ್ಯುಮ್‌ ಟಾಯ್ಲೆಟ್‌ ಮೊದಲಾದ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ.

ಹೊಸ ರೈಲು ಸಂಚಾರ ಆರಂಭವಾದರೆ ಈ ಮಾರ್ಗಗಳಲ್ಲಿ ಸಂಚರಿಸಲು ವಿಮಾನಯಾನಕ್ಕೆ ಅವಲಂಬಿತರಾಗಿದ್ದ ಜನರು ಇನ್ನು ವಂದೇ ಭಾರತ ಎಕ್ಸ್‌ಪ್ರೆಸ್‌ನತ್ತ ಮುಖ ಮಾಡಬಹುದು ಎಂಬ ನಿರೀಕ್ಷೆಯಿದೆ ಎನ್ನಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ