
ಬೆಂಗಳೂರು(ಜು.18): ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆಯಲ್ಲಿ ಈಗಾಗಲೇ 9.25 ಲಕ್ಷ ಮಂದಿಗೆ ಸೋಂಕು ಪರೀಕ್ಷೆ ನಡೆಸಿದ್ದು ವಿಶ್ವ ಆರೋಗ್ಯ ಸಂಸ್ಥೆ ನಿಗದಿ ಪಡಿಸಿರುವ ಮಿತಿಗಿಂತಲೂ ಹೆಚ್ಚು ಪರೀಕ್ಷೆಗಳನ್ನು ರಾಜ್ಯ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಶೇ.68 ಸೋಂಕಿತರ ಸೋಂಕಿನ ಮೂಲವೇ ಗೊತ್ತಿಲ್ಲ!
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಮೂಲಕ ದೇಶದಲ್ಲಿ ಅತಿ ಹೆಚ್ಚು ಆರ್ಟಿ-ಪಿಸಿಆರ್ ಕೊರೋನಾ ಸೋಂಕು ಪರೀಕ್ಷೆ ನಡೆಸಿದ ರಾಜ್ಯಗಳ ಪಟ್ಟಿಯಲ್ಲಿ ಪ್ರಥಮ ಹತ್ತು ರಾಜ್ಯಗಳಲ್ಲಿ ಸ್ಥಾನ ಪಡೆದಿದೆ ಎಂದರು.
ಪ್ರಸ್ತುತ ರಾಜ್ಯದಲ್ಲಿ ಸಾಕಷ್ಟುಪ್ರಯೋಗಾಲಯಗಳಿವೆ. ಮುಂದಿನ ಒಂದು ವಾರದಲ್ಲಿ ಇನ್ನೂ 25 ಲ್ಯಾಬ್ಗಳು ಲಭ್ಯವಾಗಲಿದ್ದು. ನಿತ್ಯ 45 ರಿಂದ 50 ಸಾವಿರ ಪರೀಕ್ಷೆ ನಡೆಸುವ ಗುರಿ ಹೊಂದ್ದೇವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ ದಿನ ಪ್ರತಿ 10 ಲಕ್ಷ ಜನಸಂಖ್ಯೆಗೆ 140 ಪರೀಕ್ಷೆಗಳನ್ನು ಮಾಡಬೇಕು ಎಂದು ಶಿಫಾರಸ್ಸು ಮಾಡಿದೆ. ಆದರೆ, ಕರ್ನಾಟಕ 297 ಪರೀಕ್ಷೆಗಳನ್ನು ಮಾಡುವ ಗುರಿ ತಲುಪಿದೆ.
ಚಾಲಕನ ಬದುಕಿಸಲು ಉಸಿರು ಕೊಟ್ಟ 10 ಮಂದಿಗೆ ಕೊರೋನಾ!
ಈವರೆಗೂ ರಾಜ್ಯದಲ್ಲಿ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು, ಅವೆಲ್ಲವೂ ನಿಖರವಾದ ವರದಿ ನೀಡುವ ಆರ್ಟಿ-ಪಿಸಿಆರ್ ಪರೀಕ್ಷೆಗಳಾಗಿರುವುದು ಮತ್ತೊಂದು ಹೆಗ್ಗಳಿಕೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ