ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಿಂದ ಬರೀ ವಿವಾದ ಮಾಡಿದ್ದೆ ಆಯ್ತು: ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಕಿಡಿ

Published : Dec 23, 2023, 04:19 PM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಿಂದ ಬರೀ ವಿವಾದ ಮಾಡಿದ್ದೆ ಆಯ್ತು: ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಕಿಡಿ

ಸಾರಾಂಶ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಿಂದ ಬರೀ ವಿವಾದ ಮಾಡಿದ್ದೇ ಆಯ್ತು. ಅಭಿವೃದ್ಧಿ, ಸಾಧನೆ ಶೂನ್ಯ ಎಂದು ಸರ್ಕಾರದ ವಿರುದ್ಧ ಮಾಜಿ ಸ್ಪೀಕರ್ ವಿರಾಜಪೇಟೆ ಮಾಜಿ ಶಾಸಕ ಕೆ.ಜಿ ಬೋಪಯ್ಯ ಕಿಡಿಕಾರಿದರು.

ಕೊಡಗು (ಡಿ.23): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಿಂದ ಬರೀ ವಿವಾದ ಮಾಡಿದ್ದೇ ಆಯ್ತು. ಅಭಿವೃದ್ಧಿ, ಸಾಧನೆ ಶೂನ್ಯ ಎಂದು ಸರ್ಕಾರದ ವಿರುದ್ಧ ಮಾಜಿ ಸ್ಪೀಕರ್ ವಿರಾಜಪೇಟೆ ಮಾಜಿ ಶಾಸಕ ಕೆ.ಜಿ ಬೋಪಯ್ಯ ಕಿಡಿಕಾರಿದರು.

ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂಧ ಇಂದು ಕೊಡಗಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಜನರನ್ನು ಓಲೈಸಿ ವೋಟ್ ಬ್ಯಾಂಕ್ ಮಾಡುತ್ತಿದೆ ಸ್ವಲ್ಪ ದಿನದ ಹಿಂದೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೋಡುತ್ತೇವೆ ಎಂದಿದ್ದರು. ನೀವೇ ಯೋಚನೆ ಮಾಡಿ ರಾಜ್ಯದಲ್ಲಿ ಬರಗಾಲ ಬಂದು ಜನ ಸಾಯುತ್ತಿದ್ದಾರೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡುವುದಕ್ಕೆ ಹಣವಿಲ್ಲ ಎಂದು ಹೇಳುವ ಸಿದ್ದರಾಮಯ್ಯ, ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಘೋಷಣೆ ಮಾಡ್ತಾರೆ. ರಾಜ್ಯದ ರೈತರ ಬಗ್ಗೆ ಸರ್ಕಾರಕ್ಕೆ ಚಿಂತೆಯಿಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಹಮ್ಮದ್ ಬಿನ್ ತುಘಲಕ್ ಎಂಬ ಹುಚ್ಚು ದೊರೆ ರೀತಿ ಆಡ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಹಿಜಾಬ್ ಗಲಭೆ ವಿಚಾರ ವಿದ್ಯಾರ್ಥಿಗಳಿಗೆ ಮರೆತೇ ಹೋಗಿತ್ತು. ಈ ಹಿಂದೆ ನಮ್ಮ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲರೂ ಯುನಿಫಾರ್ಮ್ ಗಳು ಹಾಕಬೇಕೆಂದು ಹಿಜಾಬ್ ನಿಷೇಧಿಸಿತ್ತು. ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಭಾವನೆ ಧರ್ಮ ಯಾವುದೂ ಇರಬಾರದು ಎನ್ನುವುದು ನಮ್ಮ ಉದ್ದೇಶ ಆಗಿತ್ತು. ಹಿಜಾಬ್ ವಿಷಯವನ್ನು ಕೆಲವು ಧರ್ಮಾಂಧರು ವಿವಾದ ಮಾಡಿ ಕಿಡಿ ಹಚ್ಚಿದರು. ಇದರಿಂದ ಸಾಕಷ್ಟು ತೊಂದರೆ ಆಯಿತು. ವಿದ್ಯಾರ್ಥಿಗಳು ನೋವು ಅನುಭವಿಸಿದರು.

ಪ್ರಧಾನಿ ಮೋದಿ ₹5000 ಕೊಡ್ತಾರೆ ಅನ್ನೋ ವದಂತಿ; ಗ್ಯಾಸ್ ಅಂಗಡಿ ಮುಂದೆ ಮಹಿಳೆಯರು ನೂಕುನುಗ್ಗಲು!

ಈಗ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಮತಗಳು ಸಾಲಿಡ್ ಆಗಿ ಬೇಕು ಅಂತ ಈ ರೀತಿ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಏನು ಬೇಕಾದರೂ ಆಗಲಿ ಎನ್ನುವುದು ಇವರ ಉದ್ದೇಶ. ಕನಿಷ್ಠ ಶಿಕ್ಷಣ ಸಚಿವರಿಗಾದರೂ ಇದರ ಬಗ್ಗೆ ಚಿಂತನೆ ಇರಬೇಕಿತ್ತು. ಆದರೆ ಶಿಕ್ಷಣ ಸಚಿವರದ್ದು ಯೆಸ್ ಬಾಸ್ ಎನ್ನುವ ಸ್ಥಿತಿಯಾಗಿದೆ 
ಶಿಕ್ಷಣ ಸಂಸ್ಥೆಯಲ್ಲಿ ಧರ್ಮ ಧರ್ಮ ಎಂದು ಹೊಡೆದಾಡಿಕೊಳ್ಳಬೇಕಾ? ಎಂದು ಸರ್ಕಾರವನ್ನು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ - ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!