ಅಗ್ನಿಶಾಮಕ ಲಾಂಛನದಲ್ಲಿ ಕನ್ನಡ ಬದಲು ಹಿಂದಿ ಹಾಕಿ ಎಡವಟ್ಟು..!

Kannadaprabha News   | Asianet News
Published : Aug 04, 2021, 01:29 PM IST
ಅಗ್ನಿಶಾಮಕ ಲಾಂಛನದಲ್ಲಿ ಕನ್ನಡ ಬದಲು ಹಿಂದಿ ಹಾಕಿ ಎಡವಟ್ಟು..!

ಸಾರಾಂಶ

* ಕನ್ನಡಿಗರ ತೀವ್ರ ಆಕ್ರೋಶ * ವಿವಾದ ಬಳಿಕ ಕನ್ನಡ ಲಾಂಛನ ಪ್ರತ್ಯಕ್ಷ * ಕ್ಷಮೆ ಕೂಡ ಕೇಳದ ಅಗ್ನಿಶಾಮಕ ಇಲಾಖೆ  

ಬೆಂಗಳೂರು(ಆ.04): ತನ್ನ ಅಧಿಕೃತ ಲಾಂಛನದಲ್ಲೇ ಕನ್ನಡ ಭಾಷೆ ಬಳಕೆ ಮಾಡದೆ ಇಂಗ್ಲಿಷ್‌ ಹಾಗೂ ಹಿಂದಿ ಮಾತ್ರ ಬಳಕೆ ಮಾಡುವ ದಾಷ್ಟ್ರ್ಯ ತೋರಿದ ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆಯು ಕನ್ನಡಿಗರ ತೀವ್ರ ಕೆಂಗಣ್ಣಿಗೆ ಗುರಿಯಾದ ನಂತರ ತಪ್ಪು ತಿದ್ದುಕೊಂಡ ಘಟನೆ ನಡೆದಿದೆ!

ಇಲಾಖೆಯು ಹೊಸ ವಿನ್ಯಾಸದ ಲಾಂಛನವನ್ನು ಮಂಗಳವಾರ ಮಧ್ಯಾಹ್ನ ಇಲಾಖೆಯ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿತ್ತು. ಆದರೆ, ಲಾಂಛನದಲ್ಲಿ ಕನ್ನಡ ಭಾಷೆ ಬಳಕೆ ಮಾಡದೆ ಕೇವಲ ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯನ್ನು ಮಾತ್ರ ಬಳಕೆ ಮಾಡಿತ್ತು.

ಕನ್ನಡಿಗರ ಸ್ವಾಭಿಮಾನ ಪ್ರದರ್ಶನ,  ಕನ್ನಡ ಭಾಷೆಗೆ ರಾಣಿ ಪಟ್ಟ

ಇದು ಕನ್ನಡಿಗರನ್ನು ಕಂಗೆಡಿಸಿದ್ದು, ಕನ್ನಡ ಅಧಿಕೃತ ಭಾಷೆಯಾಗಿರುವ ಕರ್ನಾಟಕದಲ್ಲೇ ಕನ್ನಡ ಬಳಕೆ ಮಾಡದೆ ಹಿಂದಿ ಭಾಷೆ ಬಳಕೆ ಮಾಡಿರುವುದನ್ನು ಖಂಡಿಸಿ ‘ಹಿಂದಿ ಗುಲಾಮಗಿರಿ ನಿಲ್ಲಿಸಿ’ ಹೆಸರಿನಲ್ಲಿ ಮಂಗಳವಾರ ಆನ್‌ಲೈನ್‌ನಲ್ಲಿ ಅಭಿಯಾನವನ್ನು ಕನ್ನಡಪ್ರೇಮಿ ನೆಟ್ಟಿಗರು ಆರಂಭಿಸಿದರು. ‘ಕರ್ನಾಟಕದ ಅಧಿಕೃತ ಭಾಷೆ ಕನ್ನಡವಾಗಿರುವಾಗ ಉತ್ತರ ಭಾರತದ ಭಾಷೆ ಹಿಂದಿಯನ್ನು ಕರ್ನಾಟಕದಲ್ಲಿ ಬಳಸುತ್ತಿರುವುದು ಏಕೆ? ಮೊದಲು ಹಿಂದಿ ತೆಗೆದು ಕನ್ನಡ ಹಾಕಿ. ಕರ್ನಾಟಕದ ಸರ್ಕಾರಿ ಸಂಸ್ಥೆಗಳಲ್ಲಿ ಕನ್ನಡಕ್ಕೇ ಜಾಗವಿಲ್ಲವೇ?’ ಎಂದು ನೂರಾರು ಮಂದಿ ಕಮೆಂಟ್‌ ಮಾಡಿದರು.

ಇದರಿಂದ ಎಚ್ಚೆತ್ತುಕೊಂಡ ಇಲಾಖೆಯು ‘ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳು’ ಎಂದು ಕನ್ನಡ ಭಾಷೆಯಲ್ಲಿರುವ ಪರಿಷ್ಕೃತ ಲಾಂಛನವನ್ನು ಪ್ರಕಟಿಸಿತು. ಹಿಂದಿ-ಇಂಗ್ಲಿಷ್‌ ಲಾಂಛನ ಪೋಸ್ಟ್‌ ಮಾಡಿದ್ದ ನಾಲ್ಕು ಗಂಟೆಗಳ ಬಳಿಕ ಸಂಪೂರ್ಣ ಕನ್ನಡದಲ್ಲಿರುವ ಲೋಗೋ ಹಾಕಿತು. ಆದರೆ, ಹಿಂದಿ-ಇಂಗ್ಲಿಷ್‌ ಪೋಸ್ಟ್‌ಅನ್ನು ಅಳಿಸಿಲ್ಲ. ಜತೆಗೆ ತನ್ನ ತಪ್ಪಿಗೆ ಕನ್ನಡಿಗರ ಕ್ಷಮೆಯಾಚಿಸಿಲ್ಲ. ಹೀಗಾಗಿ ಇಲಾಖೆ ಕುರಿತು ಕನ್ನಡ ಪೇಮಿ ನೆಟ್ಟಿಗರ ಆಕ್ರೋಶ ಸಾಮಾಜಿಕ ಜಾಲತಾಣದಲ್ಲಿ ಮುಂದುವರೆದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ