ಸಿ.ಟಿ. ರವಿ, ಚಕ್ರವರ್ತಿ ಸೂಲಿಬೆಲೆ ಬಂಧಿಸುವಂತೆ ದಲಿತ ಸಂಘ ಒತ್ತಾಯ

Published : Jul 13, 2023, 11:27 AM IST
ಸಿ.ಟಿ. ರವಿ, ಚಕ್ರವರ್ತಿ ಸೂಲಿಬೆಲೆ ಬಂಧಿಸುವಂತೆ ದಲಿತ ಸಂಘ ಒತ್ತಾಯ

ಸಾರಾಂಶ

ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವಾ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್‌.ಆರ್‌. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು.

ಟಿ. ನರಸೀಪುರ (ಜು.13) : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವಾ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್‌.ಆರ್‌. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು.

ಮೂರು ದಿನಗಳ ಹಿಂದೆ ವೇಣುಗೋಪಾಲ… ಎಂಬ ಯುವಕನ ಕೊಲೆಯಾಗಿದೆ, ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ, ವೈಯಕ್ತಿಕ ದ್ವೇಷದಿಂದ ಮತ್ತು ಸ್ವ ಪ್ರತಿಷ್ಠೆಯಿಂದ ಘಟನೆ ನಡೆದಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಕ್ರವರ್ತಿ ಸೂಲಿಬೆಲೆ ನೆಚ್ಚಿನ ಶಿಷ್ಯನ ಹತ್ಯೆ: ಸ್ನೇಹಿತರಿಂದಲೇ ಕೊಲೆಯಾದ್ನ ದಲಿತ ಯುವಕ ?

ಈ ವಿಚಾರವಾಗಿ ತಾಲೂಕಿಗೆ ಭೇಟಿ ನೀಡಿದ ಚಕ್ರವರ್ತಿ ಸೂಲಿಬೆಲೆ, ಸಿ.ಟಿ. ರವಿ, ಅಶ್ವತ್‌್ಥ ನಾರಾಯಣ…, ಎನ್‌. ಮಹೇಶ… ಅವರು ಈ ಕೊಲೆಯನ್ನು ಹಿಂದು ಕಾರ್ಯಕರ್ತನ ಕೊಲೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯುವಕರಲ್ಲಿ ವಿಷ ಬೀಜ ಬಿತ್ತಿ ಮುಂಬರುವ ಚುನಾವಣೆಯಲ್ಲಿ ಧರ್ಮಾಧರಿತ ಬೆಂಬಲ ಪಡೆಯಲು ಮಾಡುತ್ತಿರುವ ವ್ಯವಸ್ಥಿತ ಪಿತೂರಿ ಎಂದು ಅವರು ಆರೋಪಿಸಿದರು.

ಹನುಮ ಜಯಂತಿಗೆ ಅನುಮತಿ ನೀಡಿದ್ದರಿಂದ ಈ ರೀತಿ ಸಮಸ್ಯೆ ಸೃಷ್ಟಿಯಾಗಿದೆ ನಮ್ಮ ತಾಲೂಕಿಗೆ ಹನುಮ ಜಯಂತಿಯ ಅವಶ್ಯಕತೆ ಇಲ್ಲ, ನೂರಾರು ವರ್ಷಗಳಿಂದ ಧಾರ್ಮಿಕ ಜಾತ್ರೆಗಳು ನಡೆಯುತ್ತಿರುವುದರಿಂದ ಹೊಸದಾಗಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ, ಮುಂದಿನ ದಿನಗಳಲ್ಲಿ ಸರ್ಕಾರ ಹನುಮ ಜಯಂತಿಗೆ ಅನುಮತಿ ನೀಡಬಾರದು, ಬಿಜೆಪಿಯ ಯಾವುದೇ ನಾಯಕರಿಗೆ ತಾಲೂಕು ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ವೇಣುಗೋಪಾಲ್‌ ಕುಟುಂಬಕ್ಕೆ ಸರ್ಕಾರ ಆರ್ಥಿಕ ಸಹಕಾರ ನೀಡಬೇಕು ಎಂದು ಅವರು ಅಗ್ರಹಿಸಿದರು. ಶಿವಣ್ಣ, ಎಸ್‌. ನಂಜುಂಡಯ್ಯ, ಮಹದೇವಸ್ವಾಮಿ, ಮಂಜು, ನಾಗರಾಜು ಇದ್ದರು.

ದಲಿತ ಹುಡುಗನ ಬೆಳವಣಿಗೆ ಸಹಿಸದೇ ಕೊಲೆ: ಚಕ್ರವರ್ತಿ ಸೂಲಿಬೆಲೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಿಡ್ನಾಪ್‌ ಆದ 1094 ಮಕ್ಕಳು ಇನ್ನೂ ಪತ್ತೆಯಾಗಿಲ್ಲ!
ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಗೆ ಧಕ್ಕೆ ಆಗದಿರಲಿ:ಎಚ್‌ಡಿಕೆ