
ಪುತ್ತೂರು: ಪಹಲ್ಗಾಮ್ ದಾಳಿ ಖಂಡಿಸಿ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಮು ಪ್ರಚೋದಿತ ಭಾಷಣ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮತ್ತೊಂದು ಕೇಸ್ ದಾಖಲುಗೊಂಡ ಬಗ್ಗೆ ವರದಿಯಾಗಿದೆ.
ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ದ.ಕ. ಜಿಲ್ಲೆಯಿಂದ ಗಡಿಪಾರು ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ಈಗಾಗಲೇ ನೋಟಿಸ್ ಜಾರಿಯಾಗಿದೆ.
ಇದೀಗ ಮಂಗಳವಾರ ಪುತ್ತೂರು ಪೊಲೀಸರಿಂದ ಮತ್ತೊಂದು ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊಲೀಸ್ ಇಲಾಖೆಯು 2025ರ ಎ. 30ರಂದು ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಅರ್ಜಿ (Petition) ಗೆ ಸಂಬಂಧಿಸಿದಂತೆ, ತನ್ನ ಹೇಳಿಕೆಯನ್ನು ನೀಡಲು ಅರುಣ್ ಕುಮಾರ್ ಪುತ್ತಿಲ ಪುತ್ತೂರು ನಗರ ಪೊಲೀಸ್ ಠಾಣೆಗೆ ಹಾಜರಾಗಿರುತ್ತಾರೆ ಹಾಗೂ ತನ್ನ ಹೇಳಿಕೆಯನ್ನು ದಾಖಲಿಸಿ ತೆರಳಿರುತ್ತಾರೆ. ಅವರ ವಿರುದ್ಧ ಯಾವುದೇ ಹೊಸ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ