ಹಿಂದೂ ಮುಸ್ಲಿಂ ಒಟ್ಟಾಗಿ ಗಣೇಶ ಹಬ್ಬ ಆಚರಣೆ; ಭಾವೈಕ್ಯತೆಯ ಸಂದೇಶ ಸಾರಿದ ಬಾಗಲಕೋಟೆ ಮಂದಿ

Published : Sep 03, 2025, 06:22 PM IST
Bagalkote ganeshotsav

ಸಾರಾಂಶ

ಜಮಖಂಡಿಯಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಒಟ್ಟಾಗಿ ಗಣೇಶೋತ್ಸವ ಆಚರಿಸಿ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಜಂಟಿಯಾಗಿ ಗಣೇಶನನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ, ಅನ್ನಸಂತರ್ಪಣೆ ನೆರವೇರಿಸಿದ್ದಾರೆ.

ಬಾಗಲಕೋಟೆ(ಆ.3): ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ಹಿಂದೂ ಮುಸ್ಲಿಂ ಸಮಾಜದ ಬಾಂಧವರು ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ನಗರದ ತಾಲೂಕು ಕ್ರೀಡಾಂಗಣದ‌ ಮುಂಭಾಗ ಶ್ರೀ ಮಹಾಗಣಪತಿ ಉತ್ಸವ ಸಮಿತಿ ವತಿಯಿಂದ ಬೃಹತ್ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ವಿಶೇಷ ಅಂದರೆ ಈ ಶ್ರೀ ಮಹಾಗಣಪತಿ ಉತ್ಸವ ಸಮಿತಿಯಲ್ಲಿ ಮುಸ್ಲಿಂ ಬಾಂಧವರು ಕೂಡ ಸದಸ್ಯರಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಿಂದೂ ಮುಸ್ಲಿಂ ಬೇಧವಿಲ್ಲದೇ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: ಯಾವ ಧರ್ಮವು ಕೆಡುಕನ್ನು ಬೋಧಿಸುವುದಿಲ್ಲ: ಶ್ರೀಜಗದ್ಗುರು ಬಸವಲಿಂಗ ಮಹಾಸ್ವಾಮಿ

ನಂತರ ಜಂಟಿಯಾಗಿಯೇ ಅನ್ನಸಂತರ್ಪಣೆ ಕಾರ್ಯಕ್ರಮ ‌ನೆರವೇರಿಸಿದ್ದಾರೆ. ಜಮಖಂಡಿಯ ಮಾಜಿ ಶಾಸಕ ಆನಂದ‌ ನ್ಯಾಮಗೌಡ ಹಾಗೂ ಸ್ಥಳೀಯ ಪ್ರಮುಖರು ಕೂಡ ಗಣೇಶನ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ್ರು. ಒಟ್ಟಾರೆ ಜಮಖಂಡಿ ‌ನಗರದಲ್ಲಿ ಹಿಂದೂ ಮುಸ್ಲಿಂ ‌ಸಮಾಜದ ಬಾಂಧವರು‌ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌