'ಉಗ್ರ ಕಸಬ್ ನೇಣು ಹಾಕಿದ ನಿಮಗೆ ಬಿಡೋದಿಲ್ಲ' ಬೆಂಗಳೂರು ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಬಾಂಬ್ ಬೆದರಿಕೆ!

Published : Mar 02, 2026, 02:22 PM IST
 Bomb Threat

ಸಾರಾಂಶ

ಬೆಂಗಳೂರಿನ ಪಾಸ್‌ಪೋರ್ಟ್ ಪ್ರಾದೇಶಿಕ ಕಚೇರಿಗೆ ತಮಿಳು ಭಾಷೆಯಲ್ಲಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಕೆಲಕಾಲ ಆತಂಕ ಸೃಷ್ಟಿಸಿತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳವು ತಪಾಸಣೆ ನಡೆಸಿ, ಇದೊಂದು ಹುಸಿ ಬೆದರಿಕೆ ಎಂದು ದೃಢಪಡಿಸಿದ್ದಾರೆ. 

ಬೆಂಗಳೂರು ನಗರದ ಪಾಸ್‌ಪೋರ್ಟ್ ರೀಜನಲ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದ ಘಟನೆ ಸೋಮವಾರ ಕೆಲಕಾಲ ಆತಂಕ ಮೂಡಿಸಿತು. ತಮಿಳು ಭಾಷೆಯಲ್ಲಿ ಕಿಡಿಗೇಡಿಗಳು ಇ-ಮೇಲ್ ಕಳುಹಿಸಿದ್ದು, “ಉಗ್ರ ಕಸಬ್‌ಗೆ ನೇಣು ಹಾಕಿದ ನಿಮಗೆ ಬಿಡೋದಿಲ್ಲ. ಕೆಲ ಹೊತ್ತಲ್ಲೇ ಕಚೇರಿಯಲ್ಲೇ ಸ್ಪೋಟಕ ಇದ್ದು ಬ್ಲಾಸ್ಟ್ ಆಗಲಿದೆ” ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.

ಈ ಮಾಹಿತಿ ದೊರಕುತ್ತಿದ್ದಂತೆಯೇ ಕೋರಮಂಗಲ ಪೊಲೀಸ್ ಠಾಣೆ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದರು. ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪಾಸ್‌ಪೋರ್ಟ್ ಕಚೇರಿಯ ದೈನಂದಿನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಕಚೇರಿ ಆವರಣವನ್ನು ಖಾಲಿ ಮಾಡಿಸಲಾಯಿತು.

ಹಲವು ಗಂಟೆಗಳ ತಪಾಸಣೆ

ನಂತರ ಬಾಂಬ್ ನಿಷ್ಕ್ರಿಯ ದಳ ಹಾಗೂ ಡಾಗ್ ಸ್ಕ್ವಾಡ್ ಮೂಲಕ ಸಂಪೂರ್ಣ ಕಟ್ಟಡ, ಕಚೇರಿ ಕೊಠಡಿಗಳು, ಪಾರ್ಕಿಂಗ್ ಪ್ರದೇಶ ಮತ್ತು ಸುತ್ತಮುತ್ತಲಿನ ವಲಯವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಹಲವು ಗಂಟೆಗಳ ಕಾಲ ನಡೆದ ತಪಾಸಣೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆಯೇ ಆಗಿದೆ ಎಂಬುದು ದೃಢಪಟ್ಟಿದೆ. ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪರಿಶೀಲನೆ ಪೂರ್ಣಗೊಂಡ ಬಳಿಕ ಭದ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಿ, ಪಾಸ್‌ಪೋರ್ಟ್ ಪ್ರಕ್ರಿಯೆಯನ್ನು ಮರುಪ್ರಾರಂಭಿಸಲಾಗಿದೆ. ಈ ನಡುವೆ ಕಚೇರಿಗೆ ಆಗಮಿಸುವ ಸಾರ್ವಜನಿಕರನ್ನೆಲ್ಲ ಒಬ್ಬೊಬ್ಬರನ್ನೇ ಪರಿಶೀಲಿಸಿ ಒಳಗೆ ಬಿಡುವ ವ್ಯವಸ್ಥೆ ಮಾಡಲಾಗಿದೆ. ಬ್ಯಾಗ್‌ಗಳು ಹಾಗೂ ವೈಯಕ್ತಿಕ ವಸ್ತುಗಳ ತಪಾಸಣೆ ನಡೆಸಿ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.

ಮುಂದುವರಿದ ತನಿಖೆ

ಹುಸಿ ಬೆದರಿಕೆ ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಸೈಬರ್ ವಿಭಾಗದ ಸಹಕಾರದೊಂದಿಗೆ ತನಿಖೆ ಮುಂದುವರಿದಿದೆ. ಇ-ಮೇಲ್ ಮೂಲ, ಐಪಿ ವಿಳಾಸ ಹಾಗೂ ತಾಂತ್ರಿಕ ಮಾಹಿತಿಯನ್ನು ಸಂಗ್ರಹಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆ, ಹುಸಿ ಬಾಂಬ್ ಬೆದರಿಕೆಯು ಕೆಲಕಾಲ ಆತಂಕ ಸೃಷ್ಟಿಸಿದರೂ, ಪೊಲೀಸರ ತ್ವರಿತ ಕಾರ್ಯಾಚರಣೆ ಮತ್ತು ಸೂಕ್ತ ಭದ್ರತಾ ಕ್ರಮಗಳಿಂದ ಯಾವುದೇ ಅನಾಹುತ ಸಂಭವಿಸದೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸಾರ್ವಜನಿಕರು ಆತಂಕಪಡಬೇಕಿಲ್ಲ; ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಕ್ತಚಂದ್ರನ ಮಾಯೆ: ನಾಳೆ ರಾಜ್ಯದ ಹಲವು ದೇಗುಲದಲ್ಲಿ ದರ್ಶನ ಸಮಯ ಬದಲಾವಣೆ, ಹೋಳಿ ಹಬ್ಬಕ್ಕೆ ಯಾವುದೇ ತೊಂದರೆ ಇಲ್ಲ
ಕನ್ನಡಿಗರ ನೆರವಿಗೆ 24*7 ಹೆಲ್ಪ್‌ಲೈನ್, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರಕ್ಕೆ ರಾಜ್ಯ ಪತ್ರ