ವಿವಾದ ಸೃಷ್ಟಿಸಿದ ಖಾಕಿ ಪಡೆಯ ಕೇಸರಿ ದಿರಿಸಿನ ಫೋಟೋ: ಸ್ಪಷ್ಟನೆ ಕೊಟ್ಟ ಗೃಹ ಸಚಿವ

Published : Oct 19, 2021, 03:31 PM ISTUpdated : Oct 19, 2021, 06:05 PM IST
ವಿವಾದ ಸೃಷ್ಟಿಸಿದ ಖಾಕಿ ಪಡೆಯ ಕೇಸರಿ ದಿರಿಸಿನ ಫೋಟೋ: ಸ್ಪಷ್ಟನೆ ಕೊಟ್ಟ ಗೃಹ ಸಚಿವ

ಸಾರಾಂಶ

* ವಿವಾದ ಸೃಷ್ಟಿಸಿದ ಖಾಕಿ ಪಡೆಯ ಕೇಸರಿ ದಿರಿಸಿನ ಫೋಟೋ * ಸ್ಪಷ್ಟನೆ ಕೊಟ್ಟ ಗೃಹ ಸಚಿವ  ಆರಗ ಜ್ಞಾನೇಂದ್ರ * ಪೊಲೀಸರು ಕೇಸರಿ ದಿರಿಸಿನಲ್ಲಿ ಫೋಟೋ ತೆಗೆಸಿಕೊಂಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಸಿದ್ದು

ಬೆಂಗಳೂರು, (ಅ.19): ಆಯುಧ ಪೂಜೆಯ ಸಂದರ್ಭದಲ್ಲಿ ಉಡುಪಿ (Udupi) ಜಿಲ್ಲೆಯ ಕಾಪು ಹಾಗೂ ವಿಜಯಪುರ (Vijayapura) ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು (Police) ಕೇಸರಿ ದಿರಿಸಿನಲ್ಲಿ ಫೋಟೋ (Photo) ತೆಗೆಸಿಕೊಂಡಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಸ್ವತಃ  ಗೃಹ ಸಚಿವ ಆರಗ ಜ್ಞಾನೇಂದ್ರ  ಪ್ರತಿಕ್ರಿಯಿಸಿದ್ದಾರೆ.

ಇಂದು (ಅ.19) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ (Araga jnanendra),  ಕೇಸರಿ ಕೇವಲ ಬಿಜೆಪಿ (BJP) ಪಕ್ಷದ ಪ್ರತೀಕವಲ್ಲ. ಪೊಲೀಸರು ಕೇಸರಿ ಶಲ್ಯ ಧರಿಸಿದ ಬಗ್ಗೆ ರಾಜಕೀಯ (Politics) ಮಾಡುವ ವಿಪಕ್ಷಗಳು ಮುಂದೆ ಕೇಸರಿ ಬಾತ್ ನಿಷೇಧಿಸಬೇಕು ಎಂದರೆ ಒಪ್ಪಲಾಗುತ್ತದೆಯೇ? ಎಂದು  ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ಪೊಲೀಸರ ನ್ಯೂ ಗೆಟಪ್: ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ 'ತ್ರಿಶೂಲಾ'ಸ್ತ್ರ ಪ್ರಯೋಗ

ಶಿವಮೊಗ್ಗದಲ್ಲಿ ದಸರಾ ಪೂಜೆಯ ವೇಳೆ ಪೊಲೀಸರು ಕೇಸರಿ ಶಲ್ಯ ಧರಿಸಿರುವುದು ವೈಯಕ್ತಿಕ ಮತ್ತು ಸಾಂಪ್ರದಾಯಿಕ ವಿಚಾರ. ಇದರ ಮೂಲಕ ಪೊಲೀಸ್ ಇಲಾಖೆ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಕೇಸರಿ ಒಂದು ಸಾಂಕೇತಿಕ ಉಡುಪು ಮಾತ್ರ, ಬಿಜೆಪಿ ಪಕ್ಷಕ್ಕೆ ಮಾತ್ರ ಸೀಮಿತವಲ್ಲ. ಯಾರು ಬೇಕಾದರೂ ಧರಿಸಬಹುದು. ಹೀಗಾಗಿ ಶಲ್ಯ ಧರಿಸಿದ್ದರಲ್ಲಿ ಪೊಲೀಸರ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಪಕ್ಷಗಳು ಕೇಸರಿ ಶಲ್ಯ ಧರಿಸಿದ ಬಗ್ಗೆ ಟೀಕಿಸುವ ಮೂಲಕ ಒಂದು ಸಮುದಾಯ ಓಲೈಕೆ ಮಾಡುವುದನ್ನು ಕೈಬಿಡಬೇಕು. ವಿಪಕ್ಷಗಳ ಟೀಕೆಯಿಂದ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗುವುದಿಲ್ಲ. ಕೆಲ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಮುಸಲ್ಮಾನ ಪೊಲೀಸ್ ಸಿಬ್ಬಂದಿ ನಮಾಜ್ ಮಾಡಿ ಬರುತ್ತಾರೆ. ಅದನ್ನು ನಾವು ವಿರೋಧಿಸದೆ ಸಂಸ್ಕೃತಿಯ ಪ್ರತೀಕವಾಗಿ ಕಾಣುತ್ತೇವೆ ಎಂದರು.

ಈಗ ಪೊಲೀಸರು ಪೂಜೆಯ ವೇಳೆ ಶಲ್ಯ ಧರಿಸಿದ್ದನ್ನು ಬಿಜೆಪಿ ಬೆಂಬಲಿಸುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಅವರ ಟೀಕೆಗೆ ಹೆದರಿ ಕೇಸರಿ ಬಣ್ಣವನ್ನು ನಿಷೇಧಿಸಲು ಸಾಧ್ಯವಿಲ್ಲ. ನಾಡಿನ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ರಾಜಕೀಯ ಮಾಡಿದವರನ್ನು ಜನರು ಎಲ್ಲಿಟ್ಟಿದ್ದಾರೆ? ಎಂದು ವಿಪಕ್ಷ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಎಂದು ಹೇಳಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!