ಒಂದೇ ಒಂದು ಫೋನ್ ಕಾಲ್: ತಾವೇ ಕಾರು ಸ್ಟಾರ್ಟ್ ಮಾಡ್ಕೊಂಡು ಹೋದ ಗೃಹ ಸಚಿವ

Published : Mar 22, 2020, 02:48 PM ISTUpdated : Mar 22, 2020, 02:55 PM IST
ಒಂದೇ ಒಂದು ಫೋನ್ ಕಾಲ್: ತಾವೇ ಕಾರು ಸ್ಟಾರ್ಟ್ ಮಾಡ್ಕೊಂಡು ಹೋದ ಗೃಹ ಸಚಿವ

ಸಾರಾಂಶ

ದೇಶದಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳು ಹೈಅಲರ್ಟ್ ಆಗಿದ್ದು, ವೈರಸ್ ವಿರುದ್ಧ ಹೋರಾಡಲು ಪಣತೊಟ್ಟು ನಿಂತಿವೆ. ಅದರಲ್ಲೂ ಕರ್ನಾಟ ಸರ್ಕಾರ ಫುಲ್ ಅಲರ್ಟ್ ಆಗಿದೆ. ಇನ್ನು ಸಿಎಂ ಮಾಡಿದ ಒಂದೇ ಒಂದು ಫೋನ್ ಕಾಲ್‌ಗೆ ಗೃಹ ಸಚಿವ ತಾವೇ ಕಾರು ಚಾಯಿಸಿಕೊಂಡು ಹೋಗಿದ್ದಾರೆ.

ಬೆಂಗಳೂರು,(ಮಾ.22): ರಾಜ್ಯದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗೊಳ್ಳುತ್ತಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಸರಣಿ ಸಭೆಗಳನ್ನ ನಡೆಸಿದ್ದಾರೆ.

 ಇಂದು (ಭಾನುವಾರ) ಜನತಾ ಕರ್ಫ್ಯೂ ಪಾಲಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಣಗಿರಿ ನಿವಾಸದಲ್ಲಿ ಕುಳಿತುಕೊಂಡೇ ಸಭೆಗಳನ್ನ ನಡೆಸುತ್ತಿದ್ದಾರೆ.

ಜನತಾ ಕರ್ಫ್ಯೂ: ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

ಸಿಎಂ ಕರೆಗೆ ಕಾರು ಚಲಾಯಿಸಿಕೊಂಡು ಹೋದ ಸಚಿವ
ಹೌದು...ಮಹಾಮಾರಿ ವೈರಸ್ ತಡೆಗೆ ಕೆಲ ಮುಂಜಾಗ್ರತಾ ಕ್ರಮಕೈಗೊಳ್ಳಲು ಯಡಿಯೂರಪ್ಪ ಕರೆದ ತುರ್ತು ಸಭೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ವತಃ ತಾವೇ ಕಾರು ಚಲಾಯಿಸಿಕೊಂಡು ಸಿಎಂ ಮನೆ ದೌಡಾಯಿಸುರುವುದು ವಿಶೇಷ.

ಗೃಹ ಸಚಿವರು ಅಂದ್ಮೇಲೆ ಅವರಿಗೆ ಎಸ್ಕಾರ್ಟ್, ಗನ್ ಮ್ಯಾನ್, ಪಿಎಗಳು ಮತ್ತು ಕಾರು ಡ್ರೈವರ್ ಇದ್ದೇ ಇರುತ್ತಾರೆ. ಆದ್ರೆ, ಸಿಎಂ ಪೋನ್ ಮಾಡಿದ ಕೂಡಲೇ ಅಂಗರಕ್ಷಕನ್ನ ಬಿಟ್ಟು ಸ್ವಯಂ ಕಾರು ಚಲಾಯಿಸಿಕೊಂಡು ಸಿಎಂ ನಿವಾಸಕ್ಕೆ ತೆರಳಿ ಸಭೆಯಲ್ಲಿ ಪಾಲ್ಗೊಂಡರು.

ಇನ್ನು ಈ ಸಭೆಯಲ್ಲಿ ಸಚಿವ ಸುಧಾಕರ, ಸಿಎಸ್ ವಿಜಯ ಭಾಸ್ಕರ್ ಮತ್ತು ಪೋಲಿಸ್ ಮಹಾನಿರ್ದೇಶಕ ಪ್ರವಿಣ್ ಸೂದ್ ಭಾಗಿಯಾಗಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ