ರಾಮನಗರ ಹೆಸರು ಬದಲಾವಣೆ: ಕುಮಾರಸ್ವಾಮಿಗೆ ಸಚಿವ ಪರಮೇಶ್ವರ್‌ ತಿರುಗೇಟು

Published : Jul 26, 2024, 06:16 PM ISTUpdated : Jul 27, 2024, 10:37 AM IST
ರಾಮನಗರ ಹೆಸರು ಬದಲಾವಣೆ: ಕುಮಾರಸ್ವಾಮಿಗೆ ಸಚಿವ ಪರಮೇಶ್ವರ್‌ ತಿರುಗೇಟು

ಸಾರಾಂಶ

ರಾಮನಗರ ಹೆಸರು ಬದಲಾವಣೆ ಮಾಡುವ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಈ ಕುರಿತು ಪ್ರಸ್ತಾಪ ಮಾಡಿದ್ದರು. ರಾಮನಗರ ಹಾಗೇ ಇರುತ್ತೆ ರಾಮನಗರ ಡಿಸ್ಟಿಕ್ ಅನ್ನೋದರ ಬದಲಿಗೆ ಬೆಂಗಳೂರು ದಕ್ಷಿಣ ಅಂತ ಬರುತ್ತೆ ಎಂದ ಸಚಿವ ಜಿ. ಪರಮೇಶ್ವರ್‌  

ಬೆಂಗಳೂರು(ಜು.26):  ರಾಮನಗರ ಹೆಸರು ಬದಲಾವಣೆ ಮಾಡಲ್ಲ ರಾಮನಗರವನ್ನ ಬೆಂಗಳೂರು ವ್ಯಾಪ್ತಿಗೆ ತರ್ತೀವಿ. ರಾಮನಗರ ಹೆಸರಿಡೋಕು ಮುಂಚೆ ಬೆಂಗಳೂರು ರೂರಲ್ ಅಂತಾನೆ ಇತ್ತು. ಬೆಂಗಳೂರಿಗೆ ಒಂದು ಬ್ರಾಂಡ್ ನೇಮ್ ಇದೆ. ಹೀಗಾಗಿಯೇ ಬೆಂಗಳೂರು ವ್ಯಾಪ್ತಿಗೆ ಸೇರಿಸಿದ್ರೆ ಸಾಧಾರಣವಾಗಿ ಅಭಿವೃದ್ಧಿಯಾಗುತ್ತೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಜಿ. ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ.

ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಿ. ಪರಮೇಶ್ವರ್‌ ಅವರು, ರಾಮನಗರ ಹೆಸರು ಬದಲಾವಣೆ ಮಾಡುವ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಈ ಕುರಿತು ಪ್ರಸ್ತಾಪ ಮಾಡಿದ್ದರು. ರಾಮನಗರ ಹಾಗೇ ಇರುತ್ತೆ ರಾಮನಗರ ಡಿಸ್ಟಿಕ್ ಅನ್ನೋದರ ಬದಲಿಗೆ ಬೆಂಗಳೂರು ದಕ್ಷಿಣ ಅಂತ ಬರುತ್ತೆ ಎಂದು ಹೇಳಿದ್ದಾರೆ. 

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ!

ರಾಮನಗರ ಹೆಸರು ಬದಲಿಸಿದ್ರೆ ಸರ್ಕಾರ ಪತನ ಅನ್ನೋ ಹೆಚ್‌ಡಿಕೆ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಪರಮೇಶ್ವರ್‌, ರಾಮನಗರ ಕೂಡ ಬೆಂಗಳೂರಿಗೆ ಸೇರಿದಾಗ ಸ್ವಾಭಾವಿಕವಾಗಿ ಬೆಳವಣಿಗೆ ಆಗುತ್ತೆ ಅಂತ ಡಿಸಿಎಂ ಪ್ರಸ್ತಾಪ ಮಾಡಿದ್ದಾರೆ. ಇದರಲ್ಲಿ ಪೊಲಿಟಿಕಲ್ ಆ್ಯಂಗಲ್ ಏನಿಲ್ಲ. ಸರ್ಕಾರ ಅದನ್ನೆಲ್ಲ ಎದುರಿಸುತ್ತೆ. ರಾಮನಗರ ಹೆಸ್ರು ಬದಲಾವಣೆ ಮಾಡ್ತಿಲ್ಲ. ಬದಲಾಗಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸಲಾಗ್ತಿದೆ. ರಾಮನಗರ ಅಲ್ಲೇ ಇರುತ್ತೆ ಎಲ್ಲಿಯೂ ಹೋಗಲ್ಲ. ರಾಮನ ಹೆಸರು ನಾವು ತೆಗೀತಿಲ್ಲ. ರಾಮ ಅಲ್ಲೇ ಇರ್ತಾರೆ. ರಾಮನಗರನೂ ಅಲ್ಲೇ ಇರುತ್ತೆ. ಕುಮಾರಸ್ವಾಮಿಯರು ಹೇಳಿಕೆ ಕೊಡ್ತಾರೆ, ಏನು ಮಾಡೋಕೆ ಆಗಲ್ಲ. ಇದನ್ನೆಲ್ಲಾ ಸರ್ಕಾರ ಎದುರಿಸ್ಬೇಕು ಎದರಿಸುತ್ತೆ. ಇದ್ರಲ್ಲಿ ರಾಜಕೀಯದ ಪ್ರಶ್ನೆಯೇ ಇಲ್ಲ ಅಂತ ಹೇಳಿದ್ದಾರೆ. 

ರಾಮನಗರವನ್ನ ಬದಲಾವಣೆ ಮಾಡ್ತಿಲ್ಲ. ರಾಮನಗರ ಜಿಲ್ಲೆ ಅನ್ನೋದನ್ನ ಬೆಂಗಳೂರಿಗೆ ಸೇರಿಸ್ತಿದ್ದೀವಿ ಅಷ್ಟೇ ಎಂದು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ