ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ಷಮ್ಯ, ಸಹಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್

Published : Jan 29, 2024, 10:01 AM IST
ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ಷಮ್ಯ, ಸಹಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್

ಸಾರಾಂಶ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.

ತುಮಕೂರು (ಜ.29): ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆಂದು ಹೇಳಿದರು.

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸರ್ಕಾರಿ ಕಟ್ಟಡಗಳ ಬದಲಿಗೆ ದೇವಸ್ಥಾನಗಳು ಮತ್ತು ಖಾಸಗಿ ಸ್ಥಳಗಳಲ್ಲಿ ಜನರು ಕೇಸರಿ ಧ್ವಜ ಹಾರಿಸಲಿ. ಅದಕ್ಕೆ ಯಾವುದೇ ತಕರಾರು ಇರುವುದಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಿಂದಲೇ ರಾಜ್ಯದಲ್ಲಿ ಕೋಮುಗಲಭೆಗೆ ಯತ್ನ? ಬಿವೈ ವಿಜಯೇಂದ್ರ ಹೇಳಿದ್ದೇನು?

‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ನಾವು ಕೂಡ ಹಿಂದೂಗಳೇ, ಕಾನೂನಿನ ಚೌಕಟ್ಟಿನಲ್ಲಿರಿ ಎಂದು ನಾವು ಹೇಳುತ್ತಿದ್ದೇವೆ. ಅಷ್ಟೇ ವ್ಯತ್ಯಾಸ ನಮಗೂ, ಅವರಿಗೂ. ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದು ಹೇಳಿದರು.

'ಈ ಬಾರಿ ನಿಮ್ಮನ್ನು ಪ್ರಧಾನಿ ಮಾಡ್ತೀವಿ ಸಾರ್..' ಎಂದ ವ್ಯಕ್ತಿಗೆ ಮಲ್ಲಿಕಾರ್ಜುನ ಖರ್ಗೆ ಕೊಟ್ಟ ತೀಕ್ಷ್ಣ ಪ್ರತಿಕ್ರಿಯೆ ಹೀಗಿದೆ!

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!