
ದಾವಣಗೆರೆ: ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ, ಹಿರಿಯ ಗುತ್ತಿಗೆದಾರ ಎಂ.ಪಿ.ರಮೇಶ್ರ ಪುತ್ರ ಎಂ.ಆರ್.ಚಂದ್ರಶೇಖರ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಇಡೀ ಶಾಸಕರ ಕುಟುಂಬ ಈಗ ತೀವ್ರ ಆತಂಕಕ್ಕೆ ಸಿಲುಕಿದೆ.
ಶಿವಮೊಗ್ಗ ಜಿಲ್ಲೆಯ ಗೌರಿಗದ್ದೆಗೆ ಹೋಗಿ ಬರುವುದಾಗಿ ಅ.೩೦ರಂದು ರಾತ್ರಿ ೭.೩೦ಕ್ಕೆ ಹೋದ ಎಂ.ಆರ್.ಚಂದ್ರಶೇಖರ(ಚಂದ್ರು) ಈವರೆಗೆ ಮನೆಗೆ ಬಂದಿಲ್ಲ. ಹೊನ್ನಾಳಿಯಿಂದ ಮನೆ ಬಿಟ್ಟ ಸ್ವಲ್ಪ ಹೊತ್ತಿನಲ್ಲೇ ಚಂದ್ರು ಮೊಬೈಲ್ ಸ್ವಿಚ್ ಆ- ಆಗಿದ್ದು, ಎರಡು ದಿನವಾದರೂ ಮನೆಗೆ ಬರದಿದ್ದರಿಂದ, ಮೊಬೈಲ್ ಸ್ವಿಚ್ ಆ- ಆಗಿದ್ದರಿಂದ ಇಡೀ ಕುಟುಂಬ ಆತಂಕದಿಂದ ಗೌರಗದ್ದೆ ಶಿವಮೊಗ್ಗ, ಹೊನ್ನಾಳಿ ಇತರೆಡೆ ಎಲ್ಲಾ ಕಡೆ ವಿಚಾರಿಸಿದರೂ ಪ್ರಯೋಜನವಾಗದ್ದರಿಂದ ತೀವ್ರ ಆತಂಕಕ್ಕೀಡಾಗಿದೆ.
ಚಂದ್ರು ಸ್ನೇಹಿತರು, ಪರಿಚಯಸ್ಥರು, ಬಂಧು-ಬಳಗ ಹೀಗೆ ಎಲ್ಲರಿಗೂ ಸಂಪರ್ಕಿಸಿ, ಎಲ್ಲಾ ಕಡೆ ಹುಡುಕಾಡಿದರೂ ಮಗ ಪತ್ತೆಯಾಗದ ಹಿನ್ನೆಲೆಯಲ್ಲಿ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಚಂದ್ರು ತಂದೆ, ಗುತ್ತಿಗೆದಾರರೂ ಆಗಿರುವ ಎಂ.ಪಿ.ರಮೇಶ್, ಶಾಸಕ ಎಂ.ಪಿ.ರೇಣುಕಾಚಾರ್ಯ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹೊನ್ನಾಳಿ ಪೊಲೀಸರು ವೃತ್ತ ನಿರೀಕ್ಷಕ ಸಿದ್ದೇಗೌಡ ನೇತೃತ್ವದಲ್ಲಿ ನಾಪತ್ತೆಯಾಗಿರುವ ಚಂದ್ರಶೇಖರಗಾಗಿ ಶೋಧ ನಡೆಸಿದ್ದಾರಾದರೂ ಸದ್ಯಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ.
ಕುಟುಂಬದ ಹಿರಿಯ, ಮುದ್ದಿನ ಮಗ ನಾಪತ್ತೆಯಾದ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ಧುಪಡಿಸಿ, ಮಗನ ಹುಡುಕಾಟದಲ್ಲಿ ತೊಡಗಿದ್ದರು. ಮಗ ನಾಪತ್ತೆಯಾದ ಆತಂಕದಲ್ಲಿದ್ದರೂ ಸಹ ಹೊನ್ನಾಳಿ, ನ್ಯಾಮತಿ ತಾಲೂಕಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭಗಳಲ್ಲಿ ಕೇವಲ ಒಂದು ಗಂಟೆ ಮಾತ್ರ ಪಾಲ್ಗೊಂಡು, ಸೀದಾ ಮನೆಗೆ ಬಂದವರೆ ಮನೆಯ ಮಗ ಚಂದ್ರಶೇಖರ ಪತ್ತೆ ಕಾರ್ಯದ ಬಗ್ಗೆ ಪೊಲೀಸ್ ಅಽಕಾರಿಗಳು, ಎಲ್ಲಾ ಕಡೆ ಹುಡುಕಾಟ ನಡೆಸಿರುವ ತಮ್ಮ ಬೆಂಬಲಿಗರು, ಆತ್ಮೀಯರ ಜೊತೆಗೆ ಮೊಬೈಲ್ನಲ್ಲಿ ಮಾಹಿತಿ ಪಡೆಯುತ್ತಿರುವುದು ಕಂಡು ಬಂದಿತು.
ಇದನ್ನೂ ಓದಿ: ಐದು ವರ್ಷದ ಕಂದನನ್ನು ಕೊಂದು ನೇಣಿಗೆ ಶರಣಾದ ತಂದೆ
ವಿಷಯ ತಿಳಿದ ಜನರೂ ಸಹ ಶಾಸಕರ ಮನೆ ಬಳಿ ಜಮಾಯಿಸುತ್ತಿದ್ದು, ಆ ಎಲ್ಲರಿಗಿಗೂ ಸಮಾಧಾನ ಮಾಡುತ್ತಾ, ಮನೆ ಮಂದಿಗೆಲ್ಲಾ ಧೈರ್ಯ ಹೇಳುತ್ತಿದ್ದರೂ ರೇಣುಕಾಚಾರ್ಯ ಸಹ ಮಗ ಎಲ್ಲಿದ್ದಾನೋ ಎಂಬ ಆತಂಕ ಸಹಜವಾಗಿತ್ತು. ಯಾರೂ ಆತಂಕ ಪಡಬೇಡಿ, ಚಂದ್ರು ಬರುತ್ತಾನೆಂದು ಮನೆ ಬಳಿ ಬಂದವರಿಗೆಲ್ಲಾ ರೇಣುಕಾಚಾರ್ಯ ಸಮಾಧಾನಪಡಿಸುತ್ತಿದ್ದರು. ಮತ್ತೊಂದು ಕಡೆ ಪೊಲೀಸರು ನಾಪತ್ತೆಯಾಗಿರುವ ಚಂದ್ರಶೇಖರನಿಗಾಗಿ ತೀವ್ರ ಶೋಧ ಕೈಗೊಂಡಿದ್ದು, ಪತ್ತೆಗಾಗಿ ವಿಶೇಷ ತಂಡವನ್ನೂ ತೊಡಗಿಸಿದ್ದಾರೆಂದು ಹೇಳಲಾಗಿದೆ.
ಇದನ್ನೂ ಓದಿ: Crime News: ಬ್ರೇಕಪ್ ಮಾಡಿದಳೆಂದು ಪ್ರೇಯಸಿಯನ್ನು ಕೊಂದ ವಿವಾಹಿತ
ಚಂದ್ರು ಕಳೆದ ಭಾನುವಾರ ಸಂಜೆ ಮನೆಯಿಂದ ಹೋದವನು ಮರಳಿ ಬಂದಿಲ್ಲ. ಆತನ ಮೊಬೈಲ್ ಸ್ವಿಚ್ ಆ- ಆಗಿದೆ. ಯಾವಾಗಲೂ ಎಲ್ಲಿಗೆ ಹೋಗಬೇಕೆಂದರು ಜೊತೆಗೆ ಸ್ನೇಹಿತರು ಇದ್ದೇ ಇರುತ್ತಿದ್ದರು. ಆದರೆ, ಭಾನುವಾರ ಮಾತ್ರ ಆತನ ಒಬ್ಬನೇ ಶಿವಮೊಗ್ಗದ ಗೌರಿಗದ್ದೆಗೆ ಹೋಗಿ ಬರುತ್ತೇನೆಂದು ಹೋಗಿದ್ದ. ಶಿವಮೊಗ್ಗದಲ್ಲಿ ತನ್ನ ಸ್ನೇಹಿತನನ್ನು ಎರಡು ದಿನಗಳ ಹಿಂದಷ್ಟೇ ಚಂದ್ರಶೇಖರ ಮಾತನಾಡಿಸಿಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ