
ಬೆಂಗಳೂರು (ಸೆ.27): ರಾಜ್ಯದಲ್ಲಿ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿರುವ 1,20,728 (ಜಿಬಿಎ ಹೊರತುಪಡಿಸಿ) ಸಮೀಕ್ಷಕರಿಗೆ ತಲಾ ₹5,000 ಗೌರವಧನ ಮೊತ್ತವಾಗಿ ಪಾವತಿಸಲು ₹60.36 ಕೋಟಿ ಮೊದಲ ಕಂತಿನ ರೂಪದಲ್ಲಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಮೀಕ್ಷೆ ನಡೆಸುವ ಸಿಬ್ಬಂದಿಗೆ ಮೊದಲನೆಯ ಕಂತಿನಲ್ಲಿ ₹5,000 ಮತ್ತು ಪ್ರತಿ ಮನೆಗೆ ₹100 ನಂತೆ ಗೌರವ ಸಂಭಾವನೆ ನೀಡಲಾಗುವುದು. ಜತೆಗೆ ಮೇಲ್ವಿಚಾರಕರಿಗೆ ₹10,000 ನೀಡಲು ಜಿಲ್ಲಾಧಿಕಾರಿಗಳ ಖಾತೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ.22ರಿಂದ ಆರಂಭಿಸಿರುವ ಸಮೀಕ್ಷೆಯಲ್ಲಿ ಒಟ್ಟು 1.20 ಲಕ್ಷ ಸಮೀಕ್ಷೆದಾರರು (ಗಣತಿದಾರರು) ಪಾಲ್ಗೊಂಡಿದ್ದಾರೆ. ಇವರಿಗೆ ಮೊದಲ ಕಂತಿನಲ್ಲಿ ₹5,000 ಬಿಡುಗಡೆ ಮಾಡಬೇಕು. ಉಳಿದ ಅನುದಾನವನ್ನು ಮುಂದಿನ ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು.
ಇದನ್ನೂ ಓದಿ: Social and Educational Survey Karnataka: ಭಾಗವಹಿಸುವುದು ಕಡ್ಡಾಯವೇ? ಆಯೋಗ ಹೇಳಿದ್ದೇನು?
ಸಮೀಕ್ಷೆಗೆ ಸಂಬಂಧಿಸಿ ಬಿಡುಗಡೆ ಮಾಡಲಾದ ಅನುದಾನ, ವೆಚ್ಚದ ವಿವರವನ್ನು ಪ್ರತ್ಯೇಕವಾಗಿ ನಿರ್ವಹಿಸಿ ಆಯೋಗಕ್ಕೆ ಹಣ ವಿನಿಯೋಗ ಪತ್ರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ