ಕೊರೋನಾ ವರದಿ ಕೇಳದೆ ಆಸ್ಪತ್ರೆಗೆ ದಾಖಲಿಸಿಕೊಳ್ಳಿ: ಸರ್ಕಾರ ಖಡಕ್‌ ಆದೇಶ

Kannadaprabha News   | Asianet News
Published : Jul 28, 2020, 07:14 AM ISTUpdated : Jul 28, 2020, 08:23 AM IST
ಕೊರೋನಾ ವರದಿ ಕೇಳದೆ ಆಸ್ಪತ್ರೆಗೆ  ದಾಖಲಿಸಿಕೊಳ್ಳಿ: ಸರ್ಕಾರ ಖಡಕ್‌ ಆದೇಶ

ಸಾರಾಂಶ

ಖಾಸಗಿ ಆಸ್ಪತ್ರೆಗಳು ಯಾವುದೇ ರೋಗಿಗೆ ಕೊರೋನಾ ಲಕ್ಷಣಗಳಿದ್ದರೂ ಅಥವಾ ಇಲ್ಲದಿದ್ದರೂ ತಮ್ಮಲ್ಲಿ ಹಾಸಿಗೆ ಲಭ್ಯವಿದ್ದು ರೋಗಿಯು ಚಿಕಿತ್ಸಾ ಶುಲ್ಕ ಭರಿಸಲು ಸಿದ್ಧವಿದ್ದಲ್ಲಿ ದಾಖಲಾತಿ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಖಡಕ್‌ ಆದೇಶ ನೀಡಿದೆ.

ಬೆಂಗಳೂರು(ಜು.28): ಖಾಸಗಿ ಆಸ್ಪತ್ರೆಗಳು ಯಾವುದೇ ರೋಗಿಗೆ ಕೊರೋನಾ ಲಕ್ಷಣಗಳಿದ್ದರೂ ಅಥವಾ ಇಲ್ಲದಿದ್ದರೂ ತಮ್ಮಲ್ಲಿ ಹಾಸಿಗೆ ಲಭ್ಯವಿದ್ದು ರೋಗಿಯು ಚಿಕಿತ್ಸಾ ಶುಲ್ಕ ಭರಿಸಲು ಸಿದ್ಧವಿದ್ದಲ್ಲಿ ದಾಖಲಾತಿ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಖಡಕ್‌ ಆದೇಶ ನೀಡಿದೆ.

ಅಲ್ಲದೆ, ಕೋವಿಡ್‌ ಪಾಸಿಟಿವ್‌ ಇರುವ ಅಥವಾ ಇಲ್ಲದಿರುವ ರೋಗಿಗಳಿಗೆ ಪ್ರಯೋಗಾಲಯದಿಂದ ವರದಿ ತರುವಂತೆ ಆಸ್ಪತ್ರೆಗಳು ಒತ್ತಾಯಿಸುವಂತಿಲ್ಲ. ರೋಗಿಗಳು ನೀಡುವ ಮೊಬೈಲ್‌ ಎಸ್‌ಎಂಎಸ್‌, ವಾಟ್ಸಾಪ್‌ ಅಥವಾ ಆರೋಗ್ಯ ಸೇತು ವರದಿ ಇತ್ಯಾದಿಗಳ ಆಧಾರದ ಮೇಲೆ ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು.

ಬೆಂಗಳೂರು: 50 ವರ್ಷದ ಹಳೆಯ ಪ್ರತಿಷ್ಠಿತ ಬೇಕರಿ ಮಾಲೀಕ ಕೊರೋನಾಗೆ ಬಲಿ

ಒಂದೊಮ್ಮೆ ಇದನ್ನು ಉಲ್ಲಂಘಿಸಿದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ ಭಾಸ್ಕರ್‌ ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ