75 ದಿನಗಳ ಬಳಿಕ ರಾಜ್ಯ 98% ಅನ್‌ಲಾಕ್‌: ಹೋಟೆಲ್, ಮಾಲ್‌ ಓಪನ್!

Published : Jun 07, 2020, 07:14 AM ISTUpdated : Jun 07, 2020, 08:10 AM IST
75 ದಿನಗಳ ಬಳಿಕ ರಾಜ್ಯ 98% ಅನ್‌ಲಾಕ್‌: ಹೋಟೆಲ್, ಮಾಲ್‌ ಓಪನ್!

ಸಾರಾಂಶ

ನಾಳೆ ಹೋಟೆಲ್‌, ದೇಗುಲ, ಮಾಲ್‌ ಓಪನ್‌| ಎರಡೂವರೆ ತಿಂಗಳ ಲಾಕ್‌ ಅಂತ್ಯ| ಭಕ್ತರು, ಗ್ರಾಹಕರ ಸ್ವಾಗತಕ್ಕೆ ಸಕಲ ಸಿದ್ಧತೆ| ಕೊರೋನಾ ವೈರಸ್‌ ಹಾವಳಿ ಹೆಚ್ಚಳ: ಮೊದಲಿನಂತೆಯೇ ಜನ ಬರ್ತಾರಾ?

ನವದೆಹಲಿ(ಜೂ.07): ಕೊರೋನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾ.23ರಿಂದ ಬಂದ್‌ ಆಗಿರುವ ದೇಗುಲ, ಮಸೀದಿ, ಚಚ್‌ರ್‍ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್‌ ಮಾಲ್‌, ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ಸೋಮವಾರದಿಂದ ಪುನಾರಂಭಗೊಳ್ಳಲಿವೆ.

ಮೇ 30ರಂದು 5ನೇ ಹಂತದ ಲಾಕ್‌ಡೌನ್‌ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ, ಜೂ.8ರಿಂದ ಧಾರ್ಮಿಕ ಕೇಂದ್ರ, ಶಾಪಿಂಗ್‌ ಮಾಲ್‌, ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಿದೆ. ಈ ಸಂಬಂಧ ಜೂ.3 ಬುಧವಾರ ನಿಯಮಾವಳಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ಈ ಎಲ್ಲ ಕೇಂದ್ರಗಳು ಭಕ್ತಾದಿಗಳು ಹಾಗೂ ಗ್ರಾಹಕರನ್ನು ಸ್ವಾಗತಿಸಲು ಸಕಲ ಮುನ್ನೆಚ್ಚರಿಕೆ ಹಾಗೂ ಸಿದ್ಧತೆ ಕ್ರಮಗಳನ್ನೂ ಕೈಗೊಳ್ಳುತ್ತಿವೆ. ಆದರೆ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲಿನಂತೆ ಭಕ್ತಾದಿಗಳು ಹಾಗೂ ಗ್ರಾಹಕರು ಬರುತ್ತಾರಾ ಎಂಬ ಬಹುದೊಡ್ಡ ಪ್ರಶ್ನೆ ಕಾಡುತ್ತಿದೆ.

ರಾಜ್ಯದಲ್ಲಿ 5000 ದಾಟಿದ ಕೊರೋನಾ: ಒಂದೇ ದಿನ 378 ಕೇಸು!

ಪ್ರಸಿದ್ಧ ದೇವಸ್ಥಾನವಾಗಿರುವ ತಿರುಪತಿ- ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಜೂ.8ರಿಂದ ಸಿಬ್ಬಂದಿ 3 ದಿನ ರಿಹರ್ಸಲ್‌ ನಡೆಸಲಿದ್ದಾರೆ. ಬಳಿಕ ಜೂ.11ರಿಂದ ಭಕ್ತಾದಿಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಇದೇ ರೀತಿ ಹಲವು ಧಾರ್ಮಿಕ ಕೇಂದ್ರಗಳು ದಿನಾಂಕ ಪ್ರಕಟಿಸಿವೆ.

ಎರಡೂವರೆ ತಿಂಗಳ ಬಳಿಕ ಧಾರ್ಮಿಕ ಕೇಂದ್ರಗಳು, ಮಾಲ್‌ಗಳು, ಹೋಟೆಲ್‌- ರೆಸ್ಟೋರೆಂಟ್‌ಗಳು ತೆರೆಯಲ್ಪಡುತ್ತಿವೆ. ಇವುಗಳ ಕಾರ್ಯನಿರ್ವಹಣೆಗೆ ಕೇಂದ್ರ ಸರ್ಕಾರ ಹಲವು ಕಟ್ಟುಪಾಡುಗಳನ್ನು ವಿಧಿಸಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಪ್ರವೇಶಕ್ಕೂ ಮುನ್ನ ಸ್ಯಾನಿಟೈಸರ್‌ ಬಳಸಿ ಕೈ ಶುಭ್ರಗೊಳಿಸಿಕೊಳ್ಳಬೇಕು ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದೆ.

ಕೆ. ಆರ್‌. ಮಾರುಕಟ್ಟೆ ಆರಂಭವಾಗುವುದು ಡೌಟ್‌!

ಇದೇ ವೇಳೆ ಹವಾನಿಯಂತ್ರಕ ಯಂತ್ರಗಳ ಗರಿಷ್ಠ, ಕನಿಷ್ಠ ತಾಪಮಾನವನ್ನು ಸೂಚಿಸಿದ್ದು, 24ರಿಂದ 30 ಡಿಗ್ರಿಯೊಳಗೆ ಉಷ್ಣಾಂಶ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಪ್ರಸಾದ ವಿತರಿಸುವಂತಿಲ್ಲ. ತೀರ್ಥ ಪ್ರೋಕ್ಷಣೆ ಮಾಡುವಂತಿಲ್ಲ. ಭಜನೆಯಂತಹ ಕಾರ್ಯಕ್ರಮ ಹಮ್ಮಿಕೊಳ್ಳುವಂತಿಲ್ಲ ಎಂದು ಹೇಳಲಾಗಿದೆ. ಹೋಟೆಲ್‌ಗಳಲ್ಲಿ ಶೇ.50ರಷ್ಟುಗ್ರಾಹಕರು ಇರುವಂತೆ ನೋಡಿಕೊಳ್ಳಬೇಕು. ಧಾರ್ಮಿಕ ಕೇಂದ್ರ, ಹೋಟೆಲ್‌, ರೆಸ್ಟೋರೆಂಟ್‌, ಮಾಲ್‌ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಎಲಿವೇಟರ್‌, ಎಸ್ಕಲೇಟರ್‌ಗಳಲ್ಲೂ ಸಾಮಾಜಿಕ ಅಂತರ ಪಾಲಿಸಬೇಕು ಎಂದು ಸೂಚಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!