ಬಳ್ಳಾರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ! ದಲಿತರಿಗೆ ಹೋಟೆಲ್ ಪ್ರವೇಶ ನೀಡದೇ ಅವಮಾನಿಸಿದ ಮಾಲೀಕ!

Published : Jan 20, 2024, 05:45 AM IST
ಬಳ್ಳಾರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ! ದಲಿತರಿಗೆ ಹೋಟೆಲ್ ಪ್ರವೇಶ ನೀಡದೇ ಅವಮಾನಿಸಿದ ಮಾಲೀಕ!

ಸಾರಾಂಶ

ಹೋಟೆಲ್‌ನಲ್ಲಿ ದಲಿತರಿಗೆ ಪ್ರವೇಶ ನೀಡದೆ ಅವಮಾನಿಸಿದ ಘಟನೆ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದಲ್ಲಿ ಗುರುವಾರ ಜರುಗಿದೆ. ಪ್ರಕರಣ ಸಂಬಂಧ ಹೋಟೆಲ್ ಮಾಲೀಕರ ವಿರುದ್ಧ ದೂರು ದಾಖಲಾಗಿದೆ.

ಬಳ್ಳಾರಿ ಜ.(20) : ಹೋಟೆಲ್‌ನಲ್ಲಿ ದಲಿತರಿಗೆ ಪ್ರವೇಶ ನೀಡದೆ ಅವಮಾನಿಸಿದ ಘಟನೆ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದಲ್ಲಿ ಗುರುವಾರ ಜರುಗಿದೆ.

ಗುತ್ತಿಗನೂರಿನ ಬಾಳಾಪುರ ರಸ್ತೆಯಲ್ಲಿರುವ ವೀರಭದ್ರಪ್ಪ ಅವರ ಹೋಟೆಲ್‌ಗೆ ಉಪಾಹಾರ ಮಾಡಲೆಂದು ಗ್ರಾಮದ ಎಸ್ಸಿ ಕಾಲನಿ ನಿವಾಸಿಗಳಾದ ಶೇಖರಪ್ಪ, ಅಯ್ಯಪ್ಪ, ಪರುಶುರಾಮ, ರಮೇಶ ಹಾಗೂ ಮಹೇಶ್ ಅವರು ತೆರಳಿದಾಗ ಹೋಟೆಲ್ ಮಾಲೀಕ ವೀರಭದ್ರಪ್ಪ ಅವರು ಹೋಟೆಲ್ ಒಳಗೆ ಪ್ರವೇಶಿಸಿಸದೆ ಹೊರಗಡೆ ಕುಳಿತುಕೊಳ್ಳುವಂತೆ ಸೂಚಿಸಿದ್ದು, ಈ ಕುರಿತು ಪ್ರಶ್ನಿಸಲಾಗಿ, ನೀವು ಕೆಳಜಾತಿಯವರು ಒಳಗೆ ಬರಬಾರದು ಎಂದು ಹೇಳಿದರು.

 

ದಲಿತರಿಗೆ ಪ್ರವೇಶ ನಿರಾಕರಿಸಿದ ಗ್ರಾಮಸ್ಥರ ಮನೆ ಲಾಕ್‌ ಮಾಡಿ, ದೇವಾಲಯಕ್ಕೆ ನುಗ್ಗಿ ಪೂಜಿಸಿದ ದಲಿತ ಯುವಕ

ನೀವು ಈ ರೀತಿ ಅಸ್ಪೃಶ್ಯತೆ ಮಾಡುವುದು ಸರಿಯಲ್ಲ ಎಂದು ಹೇಳಿದಾಗ ಅವಾಚ್ಯ ಶಬ್ದಗಳಿಂದ ಹೋಟೆಲ್ ಮಾಲೀಕ ವೀರಭದ್ರಪ್ಪ ಹಾಗೂ ನಾಗವೇಣಿ ಅವರು ನಿಂದಿಸಿದರಲ್ಲದೆ, ಜಾತಿನಿಂದನೆ ಮಾಡಿದರು ಎಂದು ಶೇಖರಪ್ಪ ಅವರು ಕುರುಗೋಡು ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ. ಕುರುಗೋಡು ಪೊಲೀಸ್ ಅಧಿಕಾರಿಗಳು ಹಾಗೂ ತಹಸೀಲ್ದಾರ್ ರಾಘವೇಂದ್ರ ರಾವ್ ಅವರು ಗ್ರಾಮಕ್ಕೆ ಭೇಟಿ ನೀಡಿ ಶಾಂತಿಸಭೆ ನಡೆಸಿದ್ದಾರೆ.

 

ಧಾರವಾಡದ ಈ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ; ಹೋಟೆಲ್, ಕಟಿಂಗ್ ಶಾಪ್‌ಗೆ ದಲಿತರಿಗಿಲ್ಲ ಪ್ರವೇಶ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ