ಹೋಟೆಲ್‌ಗಳಿಗೆ ಇಂದಿನಿಂದ ಹೆಚ್ಚಿನ ಎಲ್ಪಿಜಿ ಪೂರೈಕೆ

Kannadaprabha News   | Kannada Prabha
Published : Mar 23, 2026, 05:18 AM IST
LPG

ಸಾರಾಂಶ

ಸೋಮವಾರದಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ ಸರಬರಾಜನ್ನು ಯುದ್ಧಪೂರ್ವದ ಸ್ಥಿತಿಯ ಶೇ.50ಕ್ಕೇರಿಸುವಂತೆ ಕೇಂದ್ರ ಪೆಟ್ರೋಲಿಯಂ ಇಲಾಖೆ ಸೂಚನೆ ನೀಡಿರುವುದರಿಂದ ಕಳೆದ 12 ದಿನದಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್‌ ಉದ್ಯಮ ಕೊಂಚ ನಿರಾಳವಾಗಲಿದೆ.

ಬೆಂಗಳೂರು : ಸೋಮವಾರದಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ ಸರಬರಾಜನ್ನು ಯುದ್ಧಪೂರ್ವದ ಸ್ಥಿತಿಯ ಶೇ.50ಕ್ಕೇರಿಸುವಂತೆ ಕೇಂದ್ರ ಪೆಟ್ರೋಲಿಯಂ ಇಲಾಖೆ ಸೂಚನೆ ನೀಡಿರುವುದರಿಂದ ಕಳೆದ 12 ದಿನದಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್‌ ಉದ್ಯಮ ಕೊಂಚ ನಿರಾಳವಾಗಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಜಂಟಿ ಕಾರ್ಯದರ್ಶಿ ‌ಕೃಷ್ಣರಾಜು, ಸೋಮವಾರದಿಂದ ಹೋಟೆಲ್‌ಗಳಿಗೆ ಈ ಹಿಂದೆ ಪೂರೈಕೆಯಾಗುತ್ತಿದ್ದ ವಾಣಿಜ್ಯ ಅನಿಲ ಸಿಲಿಂಡರ್‌ ಪ್ರಮಾಣದ ಶೇ.50 ರಷ್ಟು ಸರಬರಾಜು ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸಿಲಿಂಡರ್‌ ಸಮಸ್ಯೆ ಬಗ್ಗೆ ವಾರದ ಹಿಂದೆ ಪ್ರಧಾನಿ ಮೋದಿ ಅವರಿಗೆ ಸಂಘದಿಂದ ‌ಪತ್ರ ಬರೆಯಲಾಗಿತ್ತು. ಇದೀಗ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಷ್ಟೇ ಅನ್ಯಾಯ:

ಬೇರೆ ರಾಜ್ಯಗಳ ಹೋಟೆಲ್‌ಗಳಿಗೆ ಸಿಲಿಂಡರ್‌ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿತ್ತು. ಆದ್ದರಿಂದ ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಎದುರುದಾರರನ್ನಾಗಿ ಮಾಡಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದೆವು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಶೇ.50 ರಷ್ಟು ಗ್ಯಾಸ್‌ ಪೂರೈಕೆ ಮಾಡಲು ಆದೇಶ ನೀಡಿದೆ. ಗ್ಯಾಸ್ ಏಜೆನ್ಸಿಗಳು ಯಾವ ರೀತಿ ಸಿಲಿಂಡರ್‌ ವಿತರಿಸಲಿವೆ ಎಂದು ತಿಳಿದಿಲ್ಲ. ಸೋಮವಾರದಿಂದಲೇ ಗ್ಯಾಸ್‌ ಸಿಲಿಂಡರ್‌ ಸರಬರಾಜಾಗುವ ನಿರೀಕ್ಷೆ ಇದೆ ಎಂದು ವಿವರಿಸಿದರು.

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಹೋಟೆಲ್‌ಗಳೇ ಹೆಚ್ಚಾಗಿ ಬಳಸುವ ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯನ್ನು ಶೇ.30ಕ್ಕಿಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಕೆಲ ಹೋಟೆಲ್‌ಗಳು ಬಾಗಿಲು ಹಾಕಿದ್ದರೆ, ಇನ್ನು ಹಲವು ಹೋಟೆಲ್‌ಗಳು ತಮ್ಮ ಮೆನುವನ್ನೇ ಬದಲಾಯಿಸಿವೆ. ಅಡುಗೆ ಅನಿಲ ಸಿಗದೆ ಹಲವು ಹೋಟೆಲ್‌ಗಳು ಕಟ್ಟಿಗೆ ಬಳಸಿ ಅಡುಗೆ ಮಾಡುವ ಸ್ಥಿತಿಗೂ ತಲುಪಿವೆ.

- 12 ದಿನದ ಗ್ಯಾಸ್‌ಟ್ರಬಲ್‌ ಕೊಂಚ ಪರಿಹಾರ । ಮೆನು ಹೆಚ್ಚಳ ಸಂಭವ

ಕೊಲ್ಲಿ ಯುದ್ಧ ಆರಂಭದ ಬಳಿಕ ವಾಣಿಜ್ಯ ಎಲ್‌ಪಿಜಿ ಪೂರೈಕೆ ಕಡಿತ

ಈ ಕಾರಣದಿಂದ ಹಲವು ಹೋಟೆಲ್‌ ಬಂದ್‌, ಕೆಲವೆಡೆ ಮೆನು ಬದಲು

ಪೂರೈಕೆ ಹೆಚ್ಚಳ ಕೋರಿ ಹೋಟೆಲ್‌ ಸಂಘದಿಂದ ಕೇಂದ್ರಕ್ಕೆ ಮನವಿ

ಈ ನಡುವೆ ಪಿಎನ್‌ಜಿ ಬಳಕೆ ಉತ್ತೇಜಿಸಲು ಕೇಂದ್ರದ ಹೊಸ ಆಫರ್‌

ಪಿಎನ್‌ಜಿ ಬಳಕೆ ಒಪ್ಪಿಕೊಳ್ಳುವವರಿಗೆ ಹೆಚ್ಚಿನ ಗ್ಯಾಸ್‌ ಪೂರೈಕೆ ಅಭಯ

ಎಲ್‌ಪಿಜಿಗೆ ಸರದಿ, ಹೋಟೆಲ್‌ಗೆ ಸೌದೆ

ಬೆಂಗಳೂರು: ಅಡುಗೆ ಅನಿಲ ಪೂರೈಕೆ ವ್ಯತ್ಯಯ ಹಲವು ಭಾಗಗಳಲ್ಲಿ ಜನ ಸಾಮಾನ್ಯರನ್ನು ಹೈರಾಣಾಗಿಸಿದೆ. ಕಲಬುರಗಿ ಸೇರಿ ಹಲವು ನಗರಗಳಲ್ಲಿ ಗೃಹ ಬಳಕೆ ಎಲ್‌ಪಿಜಿಗೆ ಗ್ರಾಹಕರು ಗಂಟೆಗಳಲ್ಲಿ ಸರದಿ ಕಾಯುವ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಮತ್ತೊಂದೆಡೆ ವಾಣಿಜ್ಯ ಎಲ್ಪಿಜಿ ಪೂರೈಕೆ ಸ್ಥಗಿತ ಕಾರಣ, ಮತ್ತೊಂದಿಷ್ಟು ಹೋಟೆಲ್‌ಗಳು ಮುಚ್ಚಿದ್ದರೆ, ಇನ್ನೂ ಹಲವು ಹೋಟೆಲ್‌ಗಳು ಗ್ಯಾಸ್ ಸಿಗದ ಕಾರಣ ಸೌದೆ ಒಲೆಗೆ ಮೊರೆ ಹೋಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಚಿವ ಶಿವರಾಜ್ ತಂಗಡಗಿಗೆ ಎದೆನೋವು: ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲು
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್‌ಗೆ 'ಉಗಾಂಡಾ' ಟ್ವಿಸ್ಟ್: 50 ಕೆಜಿ ಗೋಲ್ಡ್ ಡೀಲಿಂಗ್‌ನಲ್ಲಿ ಯಾಮಾರಿದ್ದ ನಟಿ