ಕಷ್ಟ-ಸುಖ ಸಮನಾಗಿ ಸ್ವೀಕರಿಸಿದರೆ ಯಶಸ್ಸು ಸಾಧ್ಯ: ಅಮರೇಶ್ವರ ದೇವರು

Kannadaprabha News, Ravi Janekal |   | Kannada Prabha
Published : Nov 08, 2025, 07:47 AM IST
Hunagund mass wedding ceremony

ಸಾರಾಂಶ

Hunagund mass wedding ceremony: ಹುನಗುಂದ ತಾಲೂಕಿನ ವೀರಾಪೂರ ಗ್ರಾಮದ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ, ನವ ದಂಪತಿಗಳು ಕಷ್ಟ-ಸುಖಗಳನ್ನು ಸಮನಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಗಚ್ಚಿನಮಠದ ಅಮರೇಶ್ವರ ದೇವರು ಸಲಹೆ ನೀಡಿದರು. 

ಹುನಗುಂದ (ನ.8): ನವ ದಂಪತಿಗಳು ಬದುಕಿನಲ್ಲಿ ಬರುವ ಕಷ್ಟ-ಸುಖಗಳನ್ನು ಸಮನಾಗಿ ಸ್ವೀಕರಿಸಿ ಮುನ್ನೆಡೆದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹುನಗುಂದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

ಪ್ರತಿಯೊಬ್ಬರೂ ಸಂಸ್ಕಾರವಂತರಾಗಬೇಕು:

ತಾಲೂಕಿನ ವೀರಾಪೂರ ಗ್ರಾಮದ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಲಕ್ಕಮ್ಮದೇವಿ, ಪೂಜ್ಯರು ಹಾಗೂ ಗುರುಹಿರಿಯರ ಆಶೀರ್ವಾದದೊಂದಿಗೆ ವಿವಾಹ ಆಗುತ್ತಿರುವ ವಧು-ವರರು ಪುಣ್ಯವಂತರು. ಪ್ರತಿಯೊಬ್ಬರು ಉತ್ತಮ ಸಂಸ್ಕಾರವಂತರಾಗಬೇಕು ಎಂದರು.

ಗುರಗುಂಟಾದ ಚರಮೂರ್ತೆಶ್ವರ ಮಠದ ಸದಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿರುವ ಗ್ರಾಮಸ್ಥರು ಕಾರ್ಯ ಶ್ಲಾಘನೀಯ. ನವ ವಧು ಅತ್ತೆ- ಮಾವಂದಿರನ್ನು ತಮ್ಮ ತಂದೆ-ತಾಯಿಯಂತೆ ಪ್ರೀತಿಯಿಂದ ಕಾಣಬೇಕು ಎಂದು ಹೇಳಿದರು. ಬನ್ನಿಹಟ್ಟಿಯ ಅಯ್ಯಪ್ಪಯ್ಯ ಸಾರಂಗಮಠ ಮಾತನಾಡಿದರು.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳು

ಬಾದ್ಮಿನಾಳ ಕನಕಗುರುಪೀಠದ ಶಿವಸಿದ್ದೇಶ್ವರ ಸ್ವಾಮೀಜಿ, ಸರೂರಿನ ಸಿದ್ದಯ್ಯ ಗುರುವಿನ,ರಾಯಪ್ಪ ಹಾದಿಮನಿ, ಪ್ರವಚನಕಾರ ವೀರಯ್ಯಶಾಸ್ತ್ರಿ ಹಿರೇಮಠ, ರಾಮಣ್ಣ ಹಿರೇಮನಿ, ಬಸವರಾಜ ವಾಲಿಕಾರ, ಸಂಗಯ್ಯ ಜಂಗಮದ, ಫಕೀರಪ್ಪ ರಾಮವಾಡಗಿ, ಮಹಾಂತೇಶ ವಡಗೇರಿ, ಸೋಮಶೇಖರ ವನಂಜಕರ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!